Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅನ್ಯಕೋಮಿನ ಅಪ್ರಾಪ್ತ ಬಾಲಕನಿಂದ ದೇವಿ ಮೂರ್ತಿಗೆ ಅವಮಾನ: ಗ್ರಾಮಸ್ಥರಿಂದ ಥಳಿತ

Video: ಅನ್ಯಕೋಮಿನ ಅಪ್ರಾಪ್ತ ಬಾಲಕನಿಂದ ದೇವಿ ಮೂರ್ತಿಗೆ ಅವಮಾನ: ಗ್ರಾಮಸ್ಥರಿಂದ ಥಳಿತ

ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 25, 2023 | 3:48 PM

Vijayapura News: ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ನಿನ್ನೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರ, ಅಕ್ಟೋಬರ್​​​ 25: ನಾಡಹಬ್ಬ ದಸರಾ (Dasara) ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ನಿನ್ನೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಶ್ರೀ ಅಂಬಾ ಭವಾನಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ಬಳಿಕ ಕೊಠಡಿಯಲ್ಲಿದ್ದ ದೇವಿಯ ಮೂರ್ತಿಗೆ ತೊಡಿಸಿದ್ದ ಸೀರೆಯನ್ನು ತೆಗೆದು ಅವಮಾನಿಸಲಾಗಿದೆ. ಇದನ್ನು ಕಂಡ ಸ್ಥಳಯರಿಂದ ಅಪ್ರಾಪ್ತ ಬಾಲನಿಗೆ ಧರ್ಮದೇಟು ನೀಡಿದ್ದಾರೆ. ಸದ್ಯ ಯುವಕನನ್ನು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದು, ಕಾನೂನು ಪ್ರಕಾರ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದ ಪರಸ್ಥಿತಿ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.