AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’: ವಿಜಯಪುರ ದುರಂತ, ತಾಯಿಯ ಕಣ್ಣೀರ ಮಾತು

‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’: ವಿಜಯಪುರ ದುರಂತ, ತಾಯಿಯ ಕಣ್ಣೀರ ಮಾತು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 15, 2026 | 1:55 PM

Share

ವಿಜಯಪುರದ ಮೊರಟಗಿ ಗ್ರಾಮದಲ್ಲಿ ಮಳೆಗೆ ಮನೆ ಕುಸಿದು ನಾಲ್ವರು ಮೃತಪಟ್ಟ ಘಟನೆಗೆ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಸರ್ಕಾರಿ ಪರಿಹಾರ ಹಾಗೂ ವೈಯಕ್ತಿಕ ನೆರವು ಘೋಷಿಸಿದ್ದಾರೆ. ಮತ್ತೊಂದೆಡೆ, ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಜಯಪುರ, ಮೇ 15: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಸಂಭವಿಸಿದೆ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟಿದ್ದು, ಸಂಬಂಧಿಕರು ಕಣ್ಣೀರು ಹಾಕುತ್ತಿದ್ದಾರೆ. ಮೃತ ಗುರುನಾಥ ಬಡಿಗೇರ ತಾಯಿ ‘ಟಿವಿ9’ ಜತೆ ಮಾತನಾಡಿದ್ದು, ‘ಮಗ, ಸೊಸೆ-ಮೊಮ್ಮಕ್ಕಳು ಬೆಳಗಾಗೋದ್ರೊಳಗೆ ಸತ್ತೋದ್ರು’ ಎಂದು ಕಣ್ಣೀರು ಹಾಕಿದ್ದಾರೆ.

ಏತನ್ಮಧ್ಯೆ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಸಚಿವರು, ಮೃತರ ಕುಟುಂಬಕ್ಕೆ ದೈರ್ಯ ತುಂಬ ಕೆಲಸ ಮಾಡಲಾಗುತ್ತದೆ. ಸರ್ಕಾರದಿಂದ ಮೃತರ ಕುಟುಂಬದವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದರು. ಅಲ್ಲದೆ, ವೈಯುಕ್ತಿಕವಾಗಿಯೂ ನಾನೂ ಸಹಾಯ ಮಾಡುವೆ ಎಂದು ಭರವಸೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More