AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಗಂಟೆಗಳ ಕಾಲ ಅನ್ನ, ನೀರು ಇಲ್ಲದೆ ಕಗ್ಗತ್ತಲಲ್ಲಿದ್ದ ಸಾತ್ವಿಕ್​ ಆರೋಗ್ಯ ಸ್ಥಿತಿ ಹೇಗಿದೆ? ಡಾಕ್ಟರ್ ಹೇಳಿದ್ದಿಷ್ಟು

20 ಗಂಟೆಗಳ ಕಾಲ ಅನ್ನ, ನೀರು ಇಲ್ಲದೆ ಕಗ್ಗತ್ತಲಲ್ಲಿದ್ದ ಸಾತ್ವಿಕ್​ ಆರೋಗ್ಯ ಸ್ಥಿತಿ ಹೇಗಿದೆ? ಡಾಕ್ಟರ್ ಹೇಳಿದ್ದಿಷ್ಟು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 04, 2024 | 3:46 PM

Share

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪುಟ್ಟ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಸಾತ್ವಿಕ್ ಸದ್ಯದ ಆರೋಗ್ಯ ಸ್ಥಿತಿ ಬಗ್ಗೆ ವಿಜಯಪುರ ಡಿಹೆಚ್​ಒ ಡಾ.ಬಸವರಾಜ ಟಿವಿ9 ಜೊತೆ ಮಾತನಾಡಿದ್ದು, ಸಾತ್ವಿಕ್ ನಾರ್ಮಲ್​ ಆಗಿದ್ದಾನೆ, ಯಾವುದೇ ಗಾಯವಾಗಿಲ್ಲ. ಇಂಡಿ ತಾಲೂಕು ಆಸ್ಪತ್ರೆಯಲ್ಲಿ ತಾಯಿ ಮಡಿಲಲ್ಲೇ ಮಲಗಿಸಿ ಸಾತ್ವಿಕ್​ಗೆ ಚಿಕಿತ್ಸೆ ನೀಡುತ್ತಿದ್ದೇವೆ. ಸಿಟಿ ಸ್ಕ್ಯಾನ್ ಮಾಡಿಸಲು ವಿಜಯಪುರಕ್ಕೆ ಕರೆದೊಯುತ್ತೇವೆ ಎಂದಿದ್ದಾರೆ.

ವಿಜಯಪುರ, ಮಾರ್ಚ್​ 04: ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪುಟ್ಟ ಕಂದ ಸಾತ್ವಿಕ್ (sathwik) ಸಾವು ಗೆದ್ದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ. ಮಗುವಿನ ರಕ್ಷಣೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ರವಾಸಿಲಾಗಿತ್ತು. ಇದೀಗ ಸಾತ್ವಿಕ್ ಸದ್ಯದ ಆರೋಗ್ಯ ಸ್ಥಿತಿ ಬಗ್ಗೆ ವಿಜಯಪುರ ಡಿಹೆಚ್​ಒ ಡಾ.ಬಸವರಾಜ ಟಿವಿ9 ಜೊತೆ ಮಾತನಾಡಿದ್ದು, ಸಾತ್ವಿಕ್ ನಾರ್ಮಲ್​ ಆಗಿದ್ದಾನೆ, ಯಾವುದೇ ಗಾಯವಾಗಿಲ್ಲ. ಇಂಡಿ ತಾಲೂಕು ಆಸ್ಪತ್ರೆಯಲ್ಲಿ ತಾಯಿ ಮಡಿಲಲ್ಲೇ ಮಲಗಿಸಿ ಸಾತ್ವಿಕ್​ಗೆ ಚಿಕಿತ್ಸೆ ನೀಡುತ್ತಿದ್ದೇವೆ. ಸಿಟಿ ಸ್ಕ್ಯಾನ್ ಮಾಡಿಸಲು ವಿಜಯಪುರಕ್ಕೆ ಕರೆದೊಯುತ್ತೇವೆ. ಜನರು ಜಾಗ ನೀಡಿದರೆ ಆದಷ್ಟು ಬೇಗ ಕರೆದೊಯ್ಯುತ್ತೇವೆ ಎಂದು ಹೇಳಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆ ವೈದ್ಯ ಡಾ.ಈರಣ್ಣ ಪ್ರತಿಕ್ರಿಯಿಸಿದ್ದು, ನಮ್ಮ ವೈದ್ಯಕೀಯ ದಾಖಲೆ ಪ್ರಕಾರ ವಿರಳಾತಿವಿರಳ ಪ್ರಕರಣ ಇದು. ಲಚ್ಯಾಣ ಮುತ್ಯಾನ ಮತ್ತು ಸಿದ್ಧಲಿಂಗ ಮಹಾರಾಜರ ಮಹಿಮೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More