ವಿಜಯೇಂದ್ರಗೆ ದುಬೈ ಮೇಲೆ ಜಾಸ್ತಿ ಪ್ರೀತಿ, ಗೋಲ್ಡ್ ಸ್ಮಗ್ಲಿಂಗ್​ನಲ್ಲಿ ಶಾಮೀಲು ಸಚಿವರ ಹೆಸರು ಗೊತ್ತಿರಬಹುದು: ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2025 | 12:43 PM

ಶಾಸಕರಾಗಲೀ, ಮಂತ್ರಿಗಳಾಗಲೀ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನದ ಬೇಡಿಕೆ ಇಡುವುದರಲ್ಲಿ ಯಾವ ತಪ್ಪೂ ಇಲ್ಲ, ಕಾಂಗ್ರೆಸ್ ಪಕ್ಷ ಅಧಿಕಾರಲ್ಲಿರುವುದರಿಂದ ಜನರ ನಿರೀಕ್ಷೆ ಸಹಜವಾಗಿಯೇ ಮಂತ್ರಿಗಳು ಮತ್ತು ಶಾಸಕರ ಮೇಲೆ ಹೆಚ್ಚಿರುತ್ತದೆ, ಮಂತ್ರಿಗಳಾಗಿಯೂ ತಾವು ಅನುದಾನ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡೋದಾಗಿ ಖರ್ಗೆ ಹೇಳಿದರು.

ಬೆಂಗಳೂರು, ಮಾರ್ಚ್ 11 : ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao gold smuggling case) ಸಿದ್ದರಾಮಯ್ಯ ಸಂಪುಟದ ಇಬ್ಬರ ಸಚಿವರು ಶಾಮೀಲಾಗಿದ್ದರೆ ಬಿವೈ ವಿಜಯೇಂದ್ರ ಅವರು ಹೆಸರು ಹೇಳಲಿ, ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ, ಸಿಬಿಐ ಮತ್ತು ಡಿಆರ್​ಐ ಎರಡೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು, ತನಿಖೆ ಮಾಡಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಜಯೇಂದ್ರ ಅವರಿಗೆ ದುಬೈ ಕನೆಕ್ಷನ್ ಜಾಸ್ತಿ, ಅಲ್ಲೂ ಅವರ ಬ್ಯಾಂಕ್ ಖಾತೆಗಳಿವೆ ಅಂತ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ, ಅವರಿಗೆ ಸಚಿವರು ಶಾಮೀಲಾಗಿರುವ ಬಗ್ಗೆ ಮಾಹಿತಿ ಇರಬಹುದು, ಹೆಸರು ಹೇಳಲಿ ಎಂದು ಖರ್ಗೆ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯೊಬ್ಬರ ಮಗಳು ಚಿನ್ನದ ಸ್ಮಗ್ಲಿಂಗ್​ನಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ: ವಿಜಯೇಂದ್ರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.