ಅನ್ನಭಾಗ್ಯ ಯೋಜನೆಯ ಬಗ್ಗೆ ಕಾಮೆಂಟ್ ಮಾಡುವ ನೈತಿಕತೆ ವಿಜಯೇಂದ್ರಗಿಲ್ಲ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 22, 2024 | 2:32 PM

ಬಿಪಿಎಲ್ ಕಾರ್ಡುಗಳ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಆದಾಯ ತೆರಿಹಗೆ ಪಾವತಿಸುವವರಿಗೆ, ಸರ್ಕಾರೀ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ನೀಡಬೇಕೇ? ಎಂದು ಪ್ರಶ್ನಿಸಿ ಅಂಥವರ ಹೆಸರಲ್ಲಿದ್ದ ಕಾರ್ಡುಗಳನ್ನು ರದ್ದು ಮಾಡುವ ಉದ್ದೇಶದಿಂದ ಶುದ್ಧೀಕರಣ ಕಾರ್ಯ ಕೈಗೆತ್ತಿಕೊಂಡಿದ್ದು ಎಂದರು.

ಮೈಸೂರು: ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ಮಾಡುತ್ತಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ನೀಡುವ ಹೇಳಿಕೆಗಳನ್ನು ಯಾಕೆ ದೃಶ್ಯ ಮಾಧ್ಯಮಗಳಲ್ಲಿ ತೋರಿಸುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ರೇಗಾಡಿದರು. ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಮೂಲಕ ಬಿಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಮಾಡಹೊರಟಿದ್ದಾರೆ, ಇದೇ ಯಡಿಯೂರಪ್ಪ ತಾವು ಸಿಎಂ ಆಗಿದ್ದಾಗ ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಪರಿಸ್ಥಿತಿ ಹೀಗಿರುವಾಗ ವಿಜಯೇಂದ್ರ ಯಾವ ನೈತಿಕತೆಯಿಂದ ಬಡವರ ಅಕ್ಕಿ ಬಗ್ಗೆ ಮಾತಾಡುತ್ತಾರೆ ಎಂದು ಸಿದ್ದರಾಮಯ್ಯ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇಶದಲ್ಲೇ ಎರಡನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ: ಸಿಎಂ ಸಿದ್ದರಾಮಯ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.