Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷ ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ: ಎಂಪಿ ರೇಣುಕಾಚಾರ್ಯ

ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷ ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ: ಎಂಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 03, 2024 | 1:43 PM

ಬಿಎಸ್ ಯಡಿಯೂರಪ್ಪನವರು ಪಕ್ಷದ ರಾಜ್ಯಾಧ್ಯಕ್ಷನಾದಾಗ ಅವರಿಗೆ ಕೇವಲ 45ರ ಪ್ರಾಯ, ಆಗ ಬಿಬಿ ಶಿವಪ್ಪ, ಡಾ ಎಂಅರ್ ತಂಗಾ, ರಾಮಚಂದ್ರಪ್ಪ, ಮಲ್ಲಿಕಾರ್ಜುನಯ್ಯ ಮೊದಲಾದ ಹಿರಿಯ ನಾಯಕರು ಯಡಿಯೂರಪ್ಪ ಪಕ್ಷ ಮುನ್ನಡೆಸಲು ಒಪ್ಪಿಗೆ ಸೂಚಿಸಿ ಅವರೊಂದಿಗೆ ಕೆಲಸ ಮಾಡಿದ್ದರು, ಸೈಕಲ್ ಮತ್ತು ಸ್ಕೂಟರ್ ಮೇಲೆ ಓಡಾಡುತ್ತಾ ಅವರು ಪಕ್ಷ ಕಟ್ಟಿದರು ಎಂದು ರೇಣುಕಾಚಾರ್ಯ ಹೇಳಿದರು.

ನೆಲಮಂಗಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ರೆಬೆಲ್ ಬಿಜೆಪಿ ನಾಯಕರ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ, ಅದರೆ ಮೊದಲಿನ ಹಾಗೆ ಬೈದಾಡುವುದನ್ನು ಕಡಿಮೆ ಮಾಡಿದ್ದಾರೆ. ವಿಜಯೇಂದ್ರ ಇನ್ನೂ ಚಿಕ್ಕ ಹುಡುಗ ಎಂದು ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷದ ನಾಯಕತ್ವ ವಹಿಸಿಕೊಂಡು ಮುನ್ನಡೆಸಲು ವಯಸ್ಸಲ್ಲ, ಸಾಮರ್ಥ್ಯ ಮುಖ್ಯ, ಅವರಲ್ಲಿ ಸಾಮರ್ಥ್ಯ ಇರೋದನ್ನು ಮನಗಂಡೇ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯತ್ನಾಳ್ ಹಿಂದೂ ಹುಲಿಯಲ್ಲ, ಮುಖವಾಡ ಧರಿಸಿಕೊಂಡು ತಿರುಗಾಡುವ ಗೋಮುಖವ್ಯಾಘ್ರ: ರೇಣುಕಾಚಾರ್ಯ