AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು?

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು?

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jun 12, 2026 | 6:17 PM

Share

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ ಗಂಗಾಧರ ಮುತ್ತಗಿ ವೆಟರ್ನರಿ ಸೈನ್ಸ್‌ನಲ್ಲಿ 0.5 ರ್‍ಯಾಂಕ್‌ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ್‍ಯಾಂಕ್‌ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ ಗಂಗಾಧರ ಮುತ್ತಗಿ ವೆಟರ್ನರಿ ಸೈನ್ಸ್‌ನಲ್ಲಿ 0.5 ರ್‍ಯಾಂಕ್‌ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ್‍ಯಾಂಕ್‌ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಗಂಗಾಧರ ಮುತ್ತಗಿ, ದ್ವಿತೀಯ ಪಿಯುಸಿ ಅಂಕ ಪಟ್ಟಿ ಸಲ್ಲಿಕೆ ಮಾಡಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ತಡವಾಗಿ ಅಂಕಪಟ್ಟಿ ಸಲ್ಲಿಕೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ಸ್ಪಾಟ್ ರ್‍ಯಾಂಕ್‌ ನೀಡಿದೆ. ಮೊದಲ ಸ್ಥಾನ ಪಡೆದ ವಿದ್ಯಾರ್ಥಿಕ್ಕಿಂತ ಹೆಚ್ಚು ಅಂಕ ಬಂದ ಹಿನ್ನೆಲೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಲಾಗಿದೆ.

ಇನ್ನು ಈ ಬಗ್ಗೆ ಟಿವಿ9 ಜತ ಗಂಗಾಧರ ಮಾತನಾಡಿದ್ದು, ನನಗೆ ಸ್ಪಾಟ್ ರ್‍ಯಾಂಕ್‌ ಬಂದಿದ್ದು ಖುಷಿಯಾಗಿದ್ದು, ಇದಕ್ಕೆ ಇದಕ್ಕೆ ಕಾರಣ ನನ್ನ ತಂದೆ-ತಾಯಿ.ನನ್ನ ತಂದೆ ನಿತ್ಯವೂ ದುಡಿಯಲು ಹೋಗುತ್ತಾರೆ. ನಾವು ತೀರಾನೇ ಬಡ ಕುಟುಂಬದವರು. ತಂದೆಯವರ ದುಡಿಮೆಯಿಂದಲೇ ಮನೆ ನಡೆಯಬೇಕು. ಈ ಸಾಧನೆಗೆ ಅವರೇ ಕಾರಣ. ನನ್ನ ಉಪನ್ಯಾಸಕರು ಕೂಡ ಚೆನ್ನಾಗಿ ಕಲಿಸಿದ್ದಾರೆ. ಸೆರಿಕಲ್ಚರ್ ಹಾಗೂ ಅಗ್ರಿಯಲ್ಲಿ 3.5 ಸ್ಪಾಟ್ ರ್‍ಯಾಂಕ್‌ ಬಂದಿದೆ. ಕೊಂಚ ತಾಂತ್ರಿಕ ಕಾರಣದಿಂದ ಫಲಿತಾಂಶ ಬಂದಿರಲಿಲ್ಲ ಇದೀಗ ಸ್ಪಾಟ್ ರ್‍ಯಾಂಕ್‌ ನೀಡಿದ್ದಾರೆ. ನಾನು ಮುಂದೆ ವೈದ್ಯನಾಗುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More