ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್!
ಮುಖ್ಯಾಂಶಗಳು
- ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ
- ಕ್ಯಾಂಟೀನ್ನ ತಟ್ಟೆಗಳ ಶೇಖರಣೆ ಜಾಗದಲ್ಲಿ ಜಿರಳೆಗಳು ಪತ್ತೆ
- ನಿಯಮ ಉಲ್ಲಂಘನೆ ಹಿನ್ನೆಲೆ ಕ್ಯಾಂಟೀನ್ಗೆ ಬೀಗ ಹಾಕಿದ ಅಧಿಕಾರಿಗಳು
ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಚ್ಚರಿಯ ಸಂಗತಿಗಳನ್ನು ಬಯಲಿಗೆಳೆದಿದ್ದಾರೆ. ತಟ್ಟೆ ಶೇಖರಣಾ ಜಾಗದಲ್ಲಿ ಜಿರಳೆಗಳು ಮತ್ತು ಅಡಿಕೆ ಪ್ಲೇಟ್ಗಳ ಮೇಲೆ ಫಂಗಸ್ ಪತ್ತೆಯಾಗಿದೆ. ಸ್ವಚ್ಛತೆ ಕೊರತೆ ಹಾಗೂ ಅವಧಿ ಮೀರಿದ ಪದಾರ್ಥಗಳ ಬಳಕೆ ನಿಯಮ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಟೀನ್ಗೆ ಬೀಗ ಜಡಿದು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಬೆಂಗಳೂರು, ಆಗಸ್ಟ್ 13: ನಗರದಲ್ಲಿ ಕೆಲ ದಿನಗಳಿಂದ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಇಂದು ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್ಗಳ ಮೇಲೆ ಫಂಗಸ್ ಪತ್ತೆಯಾಗಿದ್ದು, ಕ್ಯಾಂಟೀನ್ ಅನ್ನು ಸೀಜ್ ಮಾಡಲಾಗಿದೆ. ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, ಅವಧಿ ಮುಗಿದ ಪದಾರ್ಥಗಳ ಬಳಕೆ ಹಾಗೂ ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ಮಾಡದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳು ಕಂಡುಬಂದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಕ್ಯಾಂಟೀನ್ಗೆ ಬೀಗ ಜಡಿದಿದ್ದು, ಸ್ಥಳದಲ್ಲಿ ‘ತಾತ್ಕಾಲಿಕವಾಗಿ ಕ್ಯಾಂಟೀನ್ ಬಂದ್’ ಎಂಬ ನಾಮಫಲಕವನ್ನು ಅಳವಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us