Chandrayaana 3: ಬಣ್ಣದ ರಂಗೋಲಿಯಲ್ಲಿ ಅರಳಿದ ‘ವಿಕ್ರಮ್ ಲ್ಯಾಂಡರ್’; ಇಲ್ಲಿದೆ ನೋಡಿ

Edited By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 4:52 PM

ಹುಬ್ಬಳ್ಳಿಯ ಶಾಂತಿನಗರ ನಿವಾಸಿ ದಿನೇಸ್​ ಎಂಬುವವರು ರಂಗೋಲಿಯಲ್ಲಿ ಚಂದ್ರಯಾನ3ರ ಚಿತ್ತಾರ ಅರಳಿಸಿದ್ದಾರೆ. ಹೌದು, ಇನ್ನೇನು ಕೆಲ ಹೊತ್ತಿನಲ್ಲಿಯೇ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಬಣ್ಣ ಬಣ್ಣದ ಚಿತ್ತಾರದಲ್ಲಿ ರೋವರ್ ರಂಗವಲ್ಲಿ ಬಿಡಿಸಿ ವಿಭಿನ್ನವಾಗಿ ಇಸ್ರೊ ವಿಜ್ಞಾನಿಗಳಿಗೆ ಶುಭ ಹಾರೈಸಿದ್ದಾರೆ.

ಹುಬ್ಬಳ್ಳಿ, ಆ.23: ಕೆಲಹೊತ್ತಿನಲ್ಲೇ ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ (Vikram lander) ಇಳಿಯಲಿದೆ.​ ಇದನ್ನು ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ವೀಕ್ಷಣೆ ಮಾಡಲಿದ್ದಾರೆ. ಇನ್ನು ಹುಬ್ಬಳ್ಳಿಯ ಶಾಂತಿನಗರ ನಿವಾಸಿ ದಿನೇಶ್ ಎಂಬುವವರು ರಂಗೋಲಿಯಲ್ಲಿ ಚಂದ್ರಯಾನ3ರ ಚಿತ್ತಾರ ಬಿಡಿಸುವ ಮೂಲಕ ವಿಭಿನ್ನವಾಗಿ ಹಾರೈಸಿದ್ದಾರೆ. ಬಣ್ಣ ಬಣ್ಣದ ಚಿತ್ತಾರದಲ್ಲಿ ರೋವರ್ ರಂಗವಲ್ಲಿ ಬಿಡಿಸಿ ವಿಭಿನ್ನವಾಗಿ ಇಸ್ರೊ ವಿಜ್ಞಾನಿಗಳಿಗೆ ಶುಭಹಾರೈಸಿದ್ದು, ತಮ್ಮ ಮನೆಯ ಆವರಣದಲ್ಲಿ ರೋವರ್, ಚಂದ್ರ ಹಾಗೂ ದೇವಿಯ ರಂಗವಲ್ಲಿ ಚಿತ್ರಬಿಡಿಸಿದ ದಿನೇಶ್, ತಮ್ಮ ಕಲೆಯ ಮೂಲಕ ಚಂದ್ರಯಾನ3 ಕ್ಕೆ ಶುಭಹಾರೈಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More