ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಘೇರಾವ್, ಗ್ರಾಮಸ್ಥರ ಮಾತಿನ ಚಕಮಕಿ
ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ವರುಣ ಕ್ಷೇತ್ರದ ಮುದ್ದುಬೀರನಹುಂಡಿಯಲ್ಲಿ ನಡೆದಿದೆ. ಗ್ರಾಮಸ್ಥರು ಘೇರಾವ್ ಹಾಕಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದು ಮಾತಿನ ಚಕಮಕಿ ನಡೆದಿದೆ.
ಮೈಸೂರು, ಮಾರ್ಚ್.08: ಮೈಸೂರು ಜಿಲ್ಲೆ ವರುಣ ಕ್ಷೇತ್ರದ ಮುದ್ದುಬೀರನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಗ್ರಾಮದೊಳಗೆ ಪ್ರವೇಶಿಸದಂತೆ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ತಡೆದ ಘಟನೆ ನಡೆದಿದೆ. ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಘಟನೆ ನಡೆದಿದೆ.
ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗ್ರಾಮಸ್ಥರು ಯತೀಂದ್ರ ವಿರುದ್ಧ ಗರಂ ಆಗಿದ್ದಾರೆ. ಪೊಲೀಸರ ಮಾತಿಗೂ ಬಗ್ಗದೇ ಸಿಎಂ ಪುತ್ರ ಯತೀಂದ್ರಗೆ ಘೇರಾವ್ ಹಾಕಿದ್ದಾರೆ. ಈ ವೇಳೆ ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಇದೇ ವಿಚಾರಕ್ಕೆ ಯತೀಂದ್ರ & ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್ಬಾಸ್ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
