ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ

| Updated By: ಆಯೇಷಾ ಬಾನು

Updated on: Sep 28, 2024 | 9:23 AM

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರುಮಯವಾಗಿದ್ದು ಸಂಪೂರ್ಣ ರಸ್ತೆ ಗದ್ದೆಯಂತಾಗಿದೆ. ಹೀಗಾಗಿ ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ರಸ್ತೆ ಅಭಿವೃದ್ಧಿ ಮಾಡದಿದ್ರೆ, ಸಚಿವ ಶಿವರಾಜ್ ತಂಗಡಗಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕೊಪ್ಪಳ, ಸೆ.28: ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರುಮಯವಾಗಿದ್ದು ಸಂಪೂರ್ಣ ರಸ್ತೆ ಗದ್ದೆಯಂತಾಗಿದೆ. ಹೀಗಾಗಿ ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕನಿಷ್ಟ ರಸ್ತೆ ಮಾಡಿಸದಿದ್ರೆ ಹೇಗೆ ಎಂದು ಕಿಡಿಕಾರಿದ್ದಾರೆ. ರಸ್ತೆ ಅಭಿವೃದ್ಧಿ ಮಾಡದಿದ್ರೆ, ಸಚಿವ ಶಿವರಾಜ್ ತಂಗಡಗಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:22 am, Sat, 28 September 24

Follow us on