ದೇವನಹಳ್ಳಿ: ದೇವಾಲಯದ ಜಮೀನು ಉಳಿಸಿಕೊಳ್ಳಲು ಗ್ರಾಮಸ್ಥರಿಗೆ ಸಾಥ್​ ನೀಡಿದ ದಿ. ಅನಂತ್ ಕುಮಾರ್ ಕುಟುಂಬ

Edited By:

Updated on: Feb 24, 2024 | 12:39 PM

ಜಮೀನು ಕಬಳಿಕೆಯಾಗ್ತಿದ್ದನ್ನ ಕಂಡ ಗ್ರಾಮಸ್ಥರು ದೇವಾಲಯದ ಜಮೀನನ್ನ ಉಳಿಸಲು ಸ್ವಂತ ಹಣವನ್ನ ಹಾಕಿ ದೇವಾಲಯವನ್ನ ಜೀರ್ಣೊದ್ದಾರ ಮಾಡಿದ್ದಾರೆ. ಅಲ್ಲದೆ ದೇವಾಲಯ ಜೀರ್ಣೋದ್ದಾರಕ್ಕೆ ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಕುಟುಂಬಸ್ಥರು ಸಹ ಸಾಥ್ ನೀಡಿದ್ದು ಈ ವೇಳೆ ಗ್ರಾಮಸ್ಥರೆಲ್ಲ ಒಟ್ಟಾಗಿ ಕಳಶಗಳನ್ನ ಹೊತ್ತು ಮೆರವಣಿಗೆ ಮೂಲಕ ಸಾಗಿ ಬಂದು ಕುಂಬಾಭಿಷೇಕ ಮಾಡಿ ಭಕ್ತಿ ಭಾವವನ್ನ ಮೆರೆದಿದ್ದಾರೆ.

ದೇವನಹಳ್ಳಿ ಬಳಿ ಕೆಂಪೇಗೌಡ ಏರ್ಪೋಟ್ ಆದ ನಂತರ ಜಮೀನುಗಳ ಬೆಲೆ ಗಗನಕ್ಕೇರಿದ್ದು ದೇವಾಲಯ ಹಾಗೂ ಸರ್ಕಾರಿ ಜಮೀನು ಕಬಳಿಸುವವರ ಸಂಖ್ಯೆ ದಿನೆದಿನೇ ಹೆಚ್ಚಾಗ್ತಿದೆ. ಈ ಮಧ್ಯೆ, ಕಬಳಿಕೆಯಾಗ್ತಿದ್ದ ಗ್ರಾಮದ ಜಮೀನನ್ನ ಗ್ರಾಮಸ್ಥರೇ ಉಳಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಭೋವಿಪಾಳ್ಯದ 120 ವರ್ಷದ ಹಳೆಯ ದೊಡ್ಡಮ್ಮ ಮಾರಮ್ಮ ದೇವಾಲಯ ಹಲವು ವರ್ಷಗಳಿಂದ ಪಾಳು ಬಿದ್ದಿತ್ತು. ಹೀಗಾಗಿ ದೇವಾಲಯದ ಒಂದು ಎಕರೆಗೂ ಅಧಿಕ ಜಮೀನು ಕೋಟಿ ಕೋಟಿ ಬೆಲೆ ಬಾಳುತ್ತೆ ಅಂತ ಕೆಲ ಭೂಗಳ್ಳರು ಜಮೀನು ಕಬಳಿಸುವ ಹುನ್ನಾರ ಮಾಡಿದ್ದರು.

ದೇವಸ್ಥಾನದ ಜೊತೆಗೆ ದೇವಾಲಯದ ಕೋಟ್ಯಂತರ ಬೆಲೆ ಬಾಳುವ ಜಮೀನು ಉಳಿಸಿಕೊಂಡ್ರ ಭೋವಿಪಾಳ್ಯದ ಗ್ರಾಮಸ್ಥರು

ಇನ್ನು ಜಮೀನು ಕಬಳಿಕೆಯಾಗ್ತಿದ್ದನ್ನ ಕಂಡ ಗ್ರಾಮಸ್ಥರು ದೇವಾಲಯದ ಜಮೀನನ್ನ ಉಳಿಸಲು ಸ್ವಂತ ಹಣವನ್ನ ಹಾಕಿ ದೇವಾಲಯವನ್ನ ಜೀರ್ಣೊದ್ದಾರ ಮಾಡಿದ್ದಾರೆ. ಅಲ್ಲದೆ ದೇವಾಲಯ ಜೀರ್ಣೋದ್ದಾರಕ್ಕೆ ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಕುಟುಂಬಸ್ಥರು ಸಹ ಸಾಥ್ ನೀಡಿದ್ದು ಈ ವೇಳೆ ಗ್ರಾಮಸ್ಥರೆಲ್ಲ ಒಟ್ಟಾಗಿ ಕಳಶಗಳನ್ನ ಹೊತ್ತು ಮೆರವಣಿಗೆ ಮೂಲಕ ಸಾಗಿ ಬಂದು ಕುಂಬಾಭಿಷೇಕ ಮಾಡಿ ಭಕ್ತಿ ಭಾವವನ್ನ ಮೆರೆದಿದ್ದಾರೆ. ಇನ್ನು ಜೀರ್ಣೋದ್ದಾರದ ನಂತರ ಗ್ರಾಮಸ್ಥರಿಗೆಲ್ಲ ಹೋಳಿಗೆ ಊಟ ಬಡಿಸಿದ್ದಾರೆ ಎಂದು ಟ್ರಸ್ಟಿ ರಮೇಶ್ ಸಂತಸಪಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 24, 2024 12:36 PM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More