ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್​ ಹೆಸರು ಎತ್ತಿದ ಯತ್ನಾಳ್​ಗೆ ತರಾಟೆಗೆ ತೆಗೆದುಕೊಂಡು ಸಾರ್ವಜನಿಕರು

Edited By:

Updated on: Nov 11, 2024 | 4:43 PM

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಕ್ಫ್​ ಹೆಸರು ಎತ್ತಿದ್ದಾರೆ. ಇದರಿಂದ ಆಕ್ರೋಶಗೊಂಡಿ ಸ್ಥಳೀಯರು ಇಲ್ಲಿ ರಾಜಕೀಯ ಮಾಡಬೇಡಿ ಎಂದು ಯತ್ನಾಳ್​ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಯತ್ನಾಳ್ ಕಾರ್ಯಕ್ರಮದಿಂದ ಹೊರ ನಡೆದರು.​

ಬಾಗಲಕೋಟೆ, (ನವೆಂಬರ್ 11): ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಮೊದಲಿಗೆ ವಿಜಯಪುರದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಎಂದು ಹೆಸರು ನಮೂದಾಗಿರುವುದು ಕಂಡುಬಂದಿದೆ. ಅಲ್ಲದೇ ಈ ವಿಚಾರವಾಗಿ ರೈತರಿಗೆ ನೋಟಿಸ್ ಸಹ ನೀಡಲಾಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ಇನ್ನು ಇದೇ ವಿಚಾರವನ್ನು ಯತ್ನಾಳ್, ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿದ್ದಾರೆ. ಆದ್ರೆ, ಸ್ಥಳೀಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇಲ್ಲಿ ರಾಜಕೀಯ ಮಾಡಬೇಡಿ. ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡ್ತೀರಿ? ದೇವಸ್ಥಾನ ನಿರ್ಮಾಣಕ್ಕೆ ಎಲ್ಲಾ ಸಮುದಾಯ ದೇಣಿಗೆ ಕೊಟ್ಟಿದೆ. ಮುಸ್ಲಿಮರು 6 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆಂದು ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಯತ್ನಾಳ್ ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದರು.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More