‘ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಡ್ತಾರೆ’; ವಿನಯ್ ಹೀಗೆ ಹೇಳಿದ್ದು ಯಾರಿಗೆ?

Updated on: Jan 13, 2024 | 9:40 AM

ವೈಯಕ್ತಿಕ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರದ್ದು 200 ಅಂಕ ದಾಟದಂತೆ ಮಾಡಿದ್ದು ತುಕಾಲಿ ಸಂತೋಷ್ ಎಂದು ವಿನಯ್ ಅಭಿಪ್ರಾಯ ಹೊರಹಾಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ (Vinay Gowda) ಅವರ ಗೇಮ್ ಎಲ್ಲರ ಗಮನ ಸೆಳೆಯುತ್ತಿದೆ. ಅವರು ಹಲವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ ಇರುತ್ತಾರೆ. ಈಗ ಅವರು ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಬಗ್ಗೆ ಮಾತನಾಡಿದ್ದಾರೆ. ವೈಯಕ್ತಿಕ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರದ್ದು 200 ಅಂಕ ದಾಟದಂತೆ ಮಾಡಿದ್ದು ತುಕಾಲಿ ಸಂತೋಷ್ ಎಂದು ವಿನಯ್ ಅಭಿಪ್ರಾಯ ಹೊರಹಾಕಿದ್ದಾರೆ. ‘ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಡ್ತಾರೆ’ ಎಂದು ಹೇಳಿದ್ದಾರೆ. ತುಕಾಲಿ ಸಂತೋಷ್ ಅವರನ್ನು ಶಕುನಿ ಎಂದು ವಿನಯ್ ಕರೆದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us