‘ನಾಲಿಗೆಗೆ ಲಗಾಮು ಬೀಳಬೇಕು’; ಕೆಟ್ಟಪದ ಬಳಕೆ ಮಾಡಿದ ವಿನಯ್​ಗೆ ನೇರವಾಗಿ ಹೇಳಿದ ಪ್ರತಾಪ್

Updated on: Jan 09, 2024 | 9:20 AM

ಜನವರಿ 8ರ ಎಪಿಸೋಡ್​ನಲ್ಲಿ ಇಬ್ಬರೂ ಜಗಳ ಮಾಡಿಕೊಂಡಿದ್ದರು. ಪ್ರತಾಪ್ ಬಗ್ಗೆ ವಿನಯ್ ಕೆಟ್ಟ ಶಬ್ದ ಪ್ರಯೋಗ ಮಾಡಿದ್ದರು. ಈಗ ನಾಮಿನೇಷನ್ ಪ್ರಕ್ರಿಯೆಯಲ್ಲೂ ಇಬ್ಬರ ಮಧ್ಯೆ ಕಿತ್ತಾಟ ನಡೆದಿದೆ. ‘

ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ (Vinay Gowda) ಹಾಗೂ ಪ್ರತಾಪ್ ಮಧ್ಯೆ ಸಾಕಷ್ಟು ಕಿತ್ತಾಟ ನಡೆಯುತ್ತಿದೆ. ಜನವರಿ 8ರ ಎಪಿಸೋಡ್​ನಲ್ಲಿ ಇಬ್ಬರೂ ಜಗಳ ಮಾಡಿಕೊಂಡಿದ್ದರು. ಪ್ರತಾಪ್ ಬಗ್ಗೆ ವಿನಯ್ ಕೆಟ್ಟ ಶಬ್ದ ಪ್ರಯೋಗ ಮಾಡಿದ್ದರು. ಈಗ ನಾಮಿನೇಷನ್ ಪ್ರಕ್ರಿಯೆಯಲ್ಲೂ ಇಬ್ಬರ ಮಧ್ಯೆ ಕಿತ್ತಾಟ ನಡೆದಿದೆ. ‘ಫಿನಾಲೆ ತಲುಪಲು ಅರ್ಹತೆ ಇಲ್ಲದ ಸ್ಪರ್ಧಿಗಳ ಹೆಸರನ್ನು ಸೂಚಿಸಿ’ ಎಂದರು ಬಿಗ್ ಬಾಸ್. ವಿನಯ್ ಅವರು ಪ್ರತಾಪ್​ನ ಹೆಸರನ್ನು ಸೂಚಿಸಿದರು. ​ಆ ಬಳಿಕ ಮಾತನಾಡಿದ ಪ್ರತಾಪ್, ‘ಎಲ್ಲಿಯವರೆಗೆ ವಿನಯ್ ನಾಲಿಗೆಗೆ ಲಗಾಮು ಬೀಳುವುದಿಲ್ಲವೋ ಅಲ್ಲಿಯವರೆಗೆ ಅವರಿಗೆ ಇಲ್ಲಿರೋಕೆ ಅರ್ಹತೆ ಇಲ್ಲ’ ಎಂದು ಪ್ರತಾಪ್ ಕಾರಣ ನೀಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ಜನವರಿ 9) ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 09, 2024 08:52 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More