AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಭಾವನಾ ಹೆಗಡೆ
|

Updated on: Apr 25, 2026 | 1:09 PM

Share

ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಬೆಂಗಳೂರು, ಏಪ್ರಿಲ್ 25: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಹೈಕೋರ್ಟ್‌ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

ತಮ್ಮ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ನ್ಯಾಯಾಲಯ ಆಲಿಸುವ ನಿರೀಕ್ಷೆಯಿದೆ. ಜೀವಾವಧಿ ಶಿಕ್ಷೆ ಆದೇಶವನ್ನು ರದ್ದುಪಡಿಸುವಂತೆ ತಮ್ಮ ಅರ್ಜಿಯಲ್ಲಿ ವಿನಯ್ ಕುಲಕರ್ಣಿ ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us