AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಜನ್ಮದಿನ: ಸಮಾಧಿ ಬಳಿ ಅಶ್ವಿನಿ ಯಾಕೆ ಬರಲಿಲ್ಲ? ಉತ್ತರಿಸಿದ ವಿನಯ್​

ಪುನೀತ್​ ಜನ್ಮದಿನ: ಸಮಾಧಿ ಬಳಿ ಅಶ್ವಿನಿ ಯಾಕೆ ಬರಲಿಲ್ಲ? ಉತ್ತರಿಸಿದ ವಿನಯ್​

ಮದನ್​ ಕುಮಾರ್​
|

Updated on:Mar 17, 2024 | 6:02 PM

Share

ಇಂದು (ಮಾರ್ಚ್​ 17) ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಡಾ. ರಾಜ್​ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಲು ಸಮಾಧಿ ಬಳಿ ಬಂದಿದ್ದಾರೆ. ಆದರೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಬರಲು ಸಾಧ್ಯವಾಗಿಲ್ಲ. ಯಾಕೆ ಎಂಬ ಪ್ರಶ್ನೆಗೆ ವಿನಯ್ ರಾಜ್​ಕುಮಾರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಾವಿರಾರು ಅಭಿಮಾನಿಗಳು

ಇಂದು ಪುನೀತ್​ ರಾಜ್​ಕುಮಾರ್​ ಜನ್ಮದಿನವನ್ನು (Puneeth Rajkumar Birthday) ಅಭಿಮಾನಿಗಳು ಸಡಗರದಿಂದ ಆಚರಿಸುತ್ತಿದ್ದಾರೆ. ಅಪ್ಪು ನಮ್ಮೊಂದಿಗೆ ಇಲ್ಲ ಎಂಬ ನೋವಿನ ನಡುವೆಯೂ ವಿವಿಧ ಕಾರ್ಯಗಳನ್ನು ಮಾಡಲಾಗುತ್ತಿದೆ. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು ಪುನೀತ್​ ಸಮಾಧಿ ಬಳಿ ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಇಲ್ಲಿಗೆ ಆಗಮಿಸಿ ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ್ದಾರೆ. ಆದರೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ಇಂದು (ಮಾರ್ಚ್​ 17) ಅಪ್ಪು ಸಮಾಧಿ ಬಳಿ ಬಂದಿಲ್ಲ. ಯಾಕೆ ಎಂಬ ಪ್ರಶ್ನೆಗೆ ವಿನಯ್ ರಾಜ್​ಕುಮಾರ್​ ಉತ್ತರಿಸಿದ್ದಾರೆ. ‘ಅವರು ಊರಲ್ಲಿ ಇಲ್ಲ. ಹಾಗಾಗಿ ಅವರಿಗೆ ಬರೋಕೆ ಆಗಿಲ್ಲ. ನಾಳೆ ಅಥವಾ ನಾಡಿದ್ದು ಇಲ್ಲಿಗೆ ಬರುತ್ತಾರೆ’ ಎಂದು ವಿನಯ್​ ರಾಜ್​ಕುಮಾರ್ (Vinay Rajkumar) ಹೇಳಿದ್ದಾರೆ. ಮೂಲಗಳ ಪ್ರಕಾರ, ಅಶ್ವಿನಿ ರಾಜ್​ಕುಮಾರ್​ ಅವರು ತಮ್ಮ ಕುಲದೇವರಾದ ವಜ್ರೇಶ್ವರಿ ದೇವಸ್ಥಾನಕ್ಕೆ ತೆರಳಿದ್ದಾರೆ. ಆ ಕಾರಣದಿಂದ ಅವರು ಇಂದು ಅಪ್ಪು ಸಮಾಧಿಗೆ ಬಂದು ಪೂಜೆ ಸಲ್ಲಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 17, 2024 06:01 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More