ಅಪ್ಪು ಹೋದಮೇಲೆ ಏರಿಯಾನಲ್ಲಿ ಗಣೇಶ ಇಡುತ್ತಿಲ್ಲ: ವಿನಯ್ ರಾಜ್​ಕುಮಾರ್

Updated on: Aug 26, 2025 | 7:19 PM

Ganesha Festival: ಸದಾಶಿವನಗರದಲ್ಲಿ ಏರಿಯಾ ಹುಡುಗರು ಗಣೇಶ ಇಡುತ್ತಿದ್ದರಂತೆ. ಆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಿ ವಿಸರ್ಜನೆ ವೇಳೆ ಪುನೀತ್ ರಾಜ್​ಕುಮಾರ್ ಅವರು ಡ್ಯಾನ್ಸ್ ಮಾಡುತ್ತಿದ್ದರಂತೆ. ಆದರೆ ಅಪ್ಪು ಕಾಲವಾದ ಬಳಿಕ ಏರಿಯಾನಲ್ಲಿ ಗಣೇಶ ಇಡುವುದು ನಿಲ್ಲಿಸಿದ್ದಾರಂತೆ. ಈ ಬಗ್ಗೆ ನಟ ವಿನಯ್ ರಾಜ್​ಕುಮಾರ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ಇಲ್ಲಿದೆ ವಿಡಿಯೋ...

ವಿನಯ್ ರಾಜ್​​ಕುಮಾರ್ (Vinay Rajkumar) ನಟನೆಯ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದೀಗ ಇಡೀ ಚಿತ್ರತಂಡ ಗೌರಿ-ಗಣೇಶ ಹಬ್ಬ ಆಚರಣೆ ಮಾಡಿದೆ. ಈ ಸಂದರ್ಭದಲ್ಲಿ ಟಿವಿ9 ಜೊತೆಗೆ ಮಾತನಾಡಿದ ವಿನಯ್ ರಾಜ್​ಕುಮಾರ್, ತಮ್ಮ ಕುಟುಂಬಕ್ಕೆ ಗಣೇಶ ಹಬ್ಬದೊಟ್ಟಿಗೆ ಇರುವ ವಿಶೇಷ ನಂಟಿನ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿ ಏರಿಯಾ ಹುಡುಗರು ಗಣೇಶ ಇಡುತ್ತಿದ್ದರಂತೆ. ಆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಿ ವಿಸರ್ಜನೆ ವೇಳೆ ಪುನೀತ್ ರಾಜ್​ಕುಮಾರ್ ಅವರು ಡ್ಯಾನ್ಸ್ ಮಾಡುತ್ತಿದ್ದರಂತೆ. ಆದರೆ ಅಪ್ಪು ಕಾಲವಾದ ಬಳಿಕ ಏರಿಯಾನಲ್ಲಿ ಗಣೇಶ ಇಡುವುದು ನಿಲ್ಲಿಸಿದ್ದಾರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More