AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್

ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್

ರಾಮು, ಆನೇಕಲ್​
| Edited By: |

Updated on: Jun 24, 2024 | 3:02 PM

Share

ಪರಿಸ್ಥಿತಿ ಚೆನ್ನಾಗಿ ಇದ್ದಾಗ ದರ್ಶನ್​ ಅವರಿಂದ ಕನ್ನಡ ಚಿತ್ರರಂಗದ ಅನೇಕರು ಸಹಾಯ ಪಡೆದಿದ್ದರು. ಆದರೆ ಈಗ ಅವರನ್ನು ನೋಡಲು ಯಾವ ಸ್ನೇಹಿತರೂ ಬರುತ್ತಿಲ್ಲ ಎಂದು ಜನರು ಸೋಶಿಯಲ್​ ಮೀಡಿಯಾದಲ್ಲಿ ಟೀಕೆ ಮಾಡಿದ್ದರು. ಇಂದು (ಜೂನ್​ 24) ವಿನೋದ್​ ಪ್ರಭಾಕರ್​ ಅವರು ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್​ರನ್ನು ಭೇಟಿ ಮಾಡಿದ್ದಾರೆ.

ನಟ ದರ್ಶನ್​ (Darshan) ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಗೆಳೆಯರು ಇದ್ದಾರೆ. ಹಲವರ ಸಿನಿಮಾಗಳಿಗೆ ದರ್ಶನ್​ ಬೆಂಬಲ ನೀಡಿದ್ದಾರೆ. ದರ್ಶನ್​ ಅವರಿಂದ ಸಹಾಯ ಪಡೆದುಕೊಂಡವರ ಸಂಖ್ಯೆ ದೊಡ್ಡದಿದೆ. ಆದರೆ ಈಗ ದರ್ಶನ್​ ಸಂಕಷ್ಟದಲ್ಲಿ ಸಿಲುಕಿರುವಾಗ ಬಹುತೇಕರು ಅಂತರ ಕಾಯ್ದುಕೊಂಡಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಅವರನ್ನು ನೋಡಲು ಆತ್ಮೀಯರು ಬಂದಿಲ್ಲ ಎಂಬ ಬೇಸರ ಅಭಿಮಾನಿಗಳಿಗೆ ಇತ್ತು. ದರ್ಶನ್​ ಅವರಿಂದ ಸಹಾಯ ಪಡೆದುಕೊಂಡಿದ್ದ ಸ್ನೇಹಿತರು ಈಗ ಎಲ್ಲಿದ್ದಾರೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪ್ರಶ್ನೆ ಎದ್ದಿತ್ತು. ಈಗ ಅಂತೂ ಇಂತೂ ಅವರ ಗೆಳೆಯರಲ್ಲಿ ಒಬ್ಬರಾದ ವಿನೋದ್​ ಪ್ರಭಾಕರ್​ ಇಂದು (ಜೂನ್​ 24) ಜೈಲಿಗೆ ಬಂದಿದ್ದಾರೆ. ಪೊಲೀಸರಿಂದ ಅನುಮತಿ ಪಡೆದುಕೊಂಡು ದರ್ಶನ್​ ಅವರನ್ನು ವಿನೋದ್​ ಪ್ರಭಾಕರ್​ (Vinod Prabhakar) ಭೇಟಿ ಮಾಡಿದ್ದಾರೆ. ಕಷ್ಟದಲ್ಲಿ ಇರುವ ಗೆಳೆಯನನ್ನು ಅವರು ಮಾತನಾಡಿಸಿಕೊಂಡು ಬಂದಿದ್ದಾರೆ. ಅಲ್ಲದೇ ದರ್ಶನ್​ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್​ ಕೂಡ ಇಂದು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More