ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್

ಪರಿಸ್ಥಿತಿ ಚೆನ್ನಾಗಿ ಇದ್ದಾಗ ದರ್ಶನ್​ ಅವರಿಂದ ಕನ್ನಡ ಚಿತ್ರರಂಗದ ಅನೇಕರು ಸಹಾಯ ಪಡೆದಿದ್ದರು. ಆದರೆ ಈಗ ಅವರನ್ನು ನೋಡಲು ಯಾವ ಸ್ನೇಹಿತರೂ ಬರುತ್ತಿಲ್ಲ ಎಂದು ಜನರು ಸೋಶಿಯಲ್​ ಮೀಡಿಯಾದಲ್ಲಿ ಟೀಕೆ ಮಾಡಿದ್ದರು. ಇಂದು (ಜೂನ್​ 24) ವಿನೋದ್​ ಪ್ರಭಾಕರ್​ ಅವರು ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್​ರನ್ನು ಭೇಟಿ ಮಾಡಿದ್ದಾರೆ.

ಅಂತೂ ಇಂತೂ ಬಂದ ಗೆಳೆಯ; ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿನೋದ್​ ಪ್ರಭಾಕರ್
| Updated By: ಮದನ್​ ಕುಮಾರ್​

Updated on: Jun 24, 2024 | 3:02 PM

ನಟ ದರ್ಶನ್​ (Darshan) ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಗೆಳೆಯರು ಇದ್ದಾರೆ. ಹಲವರ ಸಿನಿಮಾಗಳಿಗೆ ದರ್ಶನ್​ ಬೆಂಬಲ ನೀಡಿದ್ದಾರೆ. ದರ್ಶನ್​ ಅವರಿಂದ ಸಹಾಯ ಪಡೆದುಕೊಂಡವರ ಸಂಖ್ಯೆ ದೊಡ್ಡದಿದೆ. ಆದರೆ ಈಗ ದರ್ಶನ್​ ಸಂಕಷ್ಟದಲ್ಲಿ ಸಿಲುಕಿರುವಾಗ ಬಹುತೇಕರು ಅಂತರ ಕಾಯ್ದುಕೊಂಡಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಅವರನ್ನು ನೋಡಲು ಆತ್ಮೀಯರು ಬಂದಿಲ್ಲ ಎಂಬ ಬೇಸರ ಅಭಿಮಾನಿಗಳಿಗೆ ಇತ್ತು. ದರ್ಶನ್​ ಅವರಿಂದ ಸಹಾಯ ಪಡೆದುಕೊಂಡಿದ್ದ ಸ್ನೇಹಿತರು ಈಗ ಎಲ್ಲಿದ್ದಾರೆ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪ್ರಶ್ನೆ ಎದ್ದಿತ್ತು. ಈಗ ಅಂತೂ ಇಂತೂ ಅವರ ಗೆಳೆಯರಲ್ಲಿ ಒಬ್ಬರಾದ ವಿನೋದ್​ ಪ್ರಭಾಕರ್​ ಇಂದು (ಜೂನ್​ 24) ಜೈಲಿಗೆ ಬಂದಿದ್ದಾರೆ. ಪೊಲೀಸರಿಂದ ಅನುಮತಿ ಪಡೆದುಕೊಂಡು ದರ್ಶನ್​ ಅವರನ್ನು ವಿನೋದ್​ ಪ್ರಭಾಕರ್​ (Vinod Prabhakar) ಭೇಟಿ ಮಾಡಿದ್ದಾರೆ. ಕಷ್ಟದಲ್ಲಿ ಇರುವ ಗೆಳೆಯನನ್ನು ಅವರು ಮಾತನಾಡಿಸಿಕೊಂಡು ಬಂದಿದ್ದಾರೆ. ಅಲ್ಲದೇ ದರ್ಶನ್​ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್​ ಕೂಡ ಇಂದು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
Daily Devotional: ವಾಹನ ಯೋಗ ಹೇಗೆ ಪಡೆದುಕೊಳ್ಳುವುದು? ಈ ವಿಡಿಯೋ ನೋಡಿ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ
ರೆಡ್ಮಿ Note 13 Pro ಸ್ಮಾರ್ಟ್​ಫೋನ್ ಈಗ ಹೊಸ ಬಣ್ಣದಲ್ಲಿ ಲಭ್ಯ