ನಟಿ ಲೀಲಾವತಿಗೆ ತೀವ್ರ ಅನಾರೋಗ್ಯ: ಅಮ್ಮನ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ ವಿನೋದ್​ ರಾಜ್​

|

Updated on: Nov 28, 2023 | 2:34 PM

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್​ ರಾಜ್​ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ. ಸುಸಜ್ಜಿತವಾದ ಈ ಆಸ್ಪತ್ರೆಯ ಉದ್ಘಾಟನೆಗೂ ಮುನ್ನ ಮಾಧ್ಯಮಗಳ ಜೊತೆ ವಿನೋದ್ ರಾಜ್​ ಮಾತನಾಡಿದ್ದಾರೆ. ತಾಯಿಯ ಆರೋಗ್ಯ ಕ್ಷೀಣಿಸಿರುವುದಕ್ಕೆ ಅವರು ಕಣ್ಣೀರು ಹಾಕಿದ್ದಾರೆ.

ಹಿರಿಯ ನಟಿ ಲೀಲಾವತಿ (Leelavathi) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ತಾವು ಕಟ್ಟಿಸಿದ ಪಶು ಆಸ್ಪತ್ರೆ (Veterinary Hospital) ಉದ್ಘಾಟನಾ ಸಮಾರಂಭದಲ್ಲಿ ಇಂದು (ನವೆಂಬರ್​ 28) ಅವರು ಸಕ್ರಿಯವಾಗಿ ಭಾಗಿ ಆಗಬೇಕಿತ್ತು. ಅನಾರೋಗ್ಯದ ಕಾರಣದಿಂದ ಅವರಿಗೆ ಭಾಗಿಯಾಗಲು ಸಾಧ್ಯವಾಗಿಲ್ಲ. ಅಮ್ಮನ ಅನಾರೋಗ್ಯದ ಪರಿಸ್ಥಿತಿಯನ್ನು ವಿವರಿಸುತ್ತ ಪುತ್ರ ವಿನೋದ್​ ರಾಜ್​ (Vinod Raj) ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ಸಖತ್​ ಭಾವುಕರಾಗಿದ್ದಾರೆ. ಲೀಲಾವತಿ ಅವರಿಗೆ ಪ್ರಾಣಿಗಳ ಮೇಲೆ ಸಖತ್​ ಪ್ರೀತಿ. ಅದೇ ಕಾರಣಕ್ಕಾಗಿ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆಯ ಉದ್ಘಾಟನೆಯಲ್ಲಿ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on