ಯಾವಾಗ ಶುರುವಾಗಲಿದೆ ಲೀಲಾವತಿ ಸ್ಮಾರಕ ನಿರ್ಮಾಣ ಕಾರ್ಯ? ಉತ್ತರ ನೀಡಿದ ವಿನೋದ್ ರಾಜ್​

Updated on: Jan 05, 2024 | 5:14 PM

ನಟಿ ಲೀಲಾವತಿ ಅವರ ಒಂದು ತಿಂಗಳ ಪುಣ್ಯಸ್ಮರಣೆಯನ್ನು ಇಂದು (ಜ.5) ಮಾಡಲಾಗಿದೆ. ಅವರಿಗೆ ಇಷ್ಟವಾದ ಅಡುಗೆ ಮಾಡಿ ಸಮಾಧಿ ಮುಂದೆ ಇರಿಸಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಮಾತನಾಡಿದ ವಿನೋದ್​ ರಾಜ್​ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಲೀಲಾವತಿ ಅವರ ಸ್ಮಾರಕ ನಿರ್ಮಾಣ ಮಾಡಲು ವಿನೋದ್​ ಸಜ್ಜಾಗಿದ್ದಾರೆ.

ಸ್ಯಾಂಡಲ್​ವುಡ್​ನ ಹಿರಿಯ ನಟಿ ಲೀಲಾವತಿ (Leelavathi) ಅವರು ಇಹಲೋಕ ತ್ಯಜಿಸಿ ಒಂದು ತಿಂಗಳು ಕಳೆದಿದೆ. ಪುತ್ರ ವಿನೋದ್ ರಾಜ್​ ಅವರು ಒಂದು ತಿಂಗಳ ಪುಣ್ಯಸ್ಮರಣೆಯ ಕಾರ್ಯವನ್ನು ಇಂದು (ಜನವರಿ 5) ನೆರವೇರಿಸಿದ್ದಾರೆ. ತಾಯಿಗೆ ಇಷ್ಟವಾದ ಅಡುಗೆ ಮಾಡಿ ಸಮಾಧಿ ಮುಂದೆ ಇರಿಸಿ ಪೂಜೆ ಮಾಡಲಾಗಿದೆ. ಬಳಿಕ ಮಾತನಾಡಿದ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಲೀಲಾವತಿ ಅವರ ಸ್ಮಾರಕ (Leelavathi Smaraka) ನಿರ್ಮಾಣ ಮಾಡಲು ವಿನೋದ್​ ರಾಜ್​ ಆಲೋಚಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ‘ಜನವರಿ 16ರ ನಂತರ, ಸಂಕ್ರಾಂತಿ ಹಬ್ಬದ ಬಳಿಕ ಅಮ್ಮಾವರ ಸ್ಮಾರಕದ ಕೆಲಸ ಶುರು ಮಾಡುತ್ತೇನೆ. ಭಗವಂತನ ದಯೆ, ನಿಮ್ಮೆಲ್ಲರ ಆಶೀರ್ವಾದಿಂದ ಆದಷ್ಟು ಬೇಗ ಅದನ್ನು ಮಾಡಿ ಮುಗಿಸುತ್ತೇನೆ’ ಎಂದು ವಿನೋದ್​ ರಾಜ್​ (Vinod Raj) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More