Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಸುಷ್ಮಾ ಚಕ್ರೆ
|

Updated on:Apr 08, 2025 | 9:34 PM

ಪಶ್ಚಿಮ ಬಂಗಾಳದ ಪೊಲೀಸರು ಮುರ್ಷಿದಾಬಾದ್‌ನ ಬೀದಿಗಳಲ್ಲಿ ಹಿಂಸಾತ್ಮಕ ಇಸ್ಲಾಮಿಕ್ ಗುಂಪು ನಡೆಸುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದರು. ಇತ್ತೀಚಿನ ಕಾರ್ತಿಕ ಪೂಜೆಯ ಸಂದರ್ಭದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ ನಡೆದ ಪ್ರದೇಶ ಇದಾಗಿದೆ. ಉದ್ವಿಗ್ನತೆ ಹೆಚ್ಚಾದಾಗ ಹಲವಾರು ರೈಲುಗಳನ್ನು ಸ್ಥಗಿತಗೊಳಿಸಲಾಯಿತು. ರಾಷ್ಟ್ರೀಯ ಹೆದ್ದಾರಿ 12 ಅನ್ನು ನಿರ್ಬಂಧಿಸಲು ಜಂಗಿಪುರದಿಂದ ಉಮರ್‌ಪುರಕ್ಕೆ ಮೆರವಣಿಗೆ ತೆರಳಿದಾಗ ಪೊಲೀಸರು ಅವರನ್ನು ತಡೆದರು. ಇದರಿಂದ ಘರ್ಷಣೆ ಸಂಭವಿಸಿತು. ಇದರಲ್ಲಿ 2 ವಾಹನಗಳಿಗೆ ಬೆಂಕಿ ಹಚ್ಚಲಾಯಿತು.

ಕೊಲ್ಕತ್ತಾ, ಏಪ್ರಿಲ್ 8: ವಕ್ಫ್ ಮಸೂದೆಯನ್ನು (Waqf Bill) ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜಂಗಿಪುರ ಪಿಡಬ್ಲ್ಯೂಡಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿತು. ರಾಷ್ಟ್ರೀಯ ಹೆದ್ದಾರಿ 12 ಅನ್ನು ನಿರ್ಬಂಧಿಸಲು ಜಂಗಿಪುರದಿಂದ ಉಮರ್‌ಪುರಕ್ಕೆ ಮೆರವಣಿಗೆ ತೆರಳಿದಾಗ ಪೊಲೀಸರು ಅವರನ್ನು ತಡೆದರು. ಇದರಿಂದ ಘರ್ಷಣೆ ಸಂಭವಿಸಿತು. ಇದರಲ್ಲಿ 2 ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಪ್ರತಿಭಟನಾ ಮೆರವಣಿಗೆಯ ಸಮಯದಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗುತ್ತಿದ್ದಂತೆ, ಪ್ರತಿಭಟನಾಕಾರರನ್ನು ತೆರವುಗೊಳಿಸಲು ಪೊಲೀಸರು ಆಗಮಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 08, 2025 09:33 PM