AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ನೀವು ಜಗತ್ತು ಗೆಲ್ಲುತ್ತೀರಿ”: ಭಾವುಕರಾಗಿ ಮೋದಿ ಭಾವಚಿತ್ರಕ್ಕೆ ಮುತ್ತಿಟ್ಟ ರೈತ

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಕಂಡ ಕೂಡಲೇ ಭಾವುರಾದ ರೈತರೊಬ್ಬರು ನೀವು ಜಗತ್ತನ್ನು ಗೆಲ್ಲುತ್ತೀರಿ ಎಂದು ಹೇಳಿ ಮುತ್ತು ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Rakesh Nayak Manchi
Rakesh Nayak Manchi|

Updated on:Mar 30, 2023 | 7:22 PM

Share

ಮುಖ್ಯಾಂಶಗಳು

  • ಬಸ್​ನಲ್ಲಿದ್ದ ಮೋದಿ ಭಾವಚಿತ್ರಕ್ಕೆ ರೈತರೊಬ್ಬರು ಮುತ್ತು ಕೊಟ್ಟಿದ್ದಾರೆ
  • ಪ್ರಧಾನಿ ಮೋದಿಗೆ ರೈತರೊಬ್ಬರು ಮುತ್ತಿಟ್ಟ ವಿಡಿಯೋ ವೈರಲ್
  • ನೀವು ಜಗತ್ತು ಗೆಲ್ಲುತ್ತೀರಿ ಎಂದು ಹೇಳಿ ಭಾವುಕರಾದ ರೈತ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಭಿಮಾನಿಗಳ ಸಂಖ್ಯೆಗೇನು ಕಡಿಮೆ ಇಲ್ಲ. ಅವರು ಪ್ರಧಾನಿಯಾದ ನಂತರ ಕೈಗೊಂಡ ಯೋಜನೆಗಳು, ಪ್ರಮುಖ ನಿರ್ಧಾರಗಳಿಂದಾಗಿ ದೇಶ ವಿದೇಶಗಳಲ್ಲೂ ಜನಮನ ಗೆದ್ದಿದ್ದಾರೆ. ಅದೇ ರೀತಿ ರೈತರ ವಿಚಾರದಲ್ಲೂ ಕಾಳಜಿ ವಹಿಸಿದ್ದಾರೆ. ಇದಕ್ಕೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಉದಾಹರಣೆ. ಇದೇ ಕಾರಣಕ್ಕೆ ಒಂದಷ್ಟು ರೈತರು ಮೋದಿ ಆಡಳಿತದ ಪರ ಇದ್ದಾರೆ. ಇದೀಗ ರೈತರೊಬ್ಬರು ಮೋದಿಯ ಭಾವಚಿತ್ರ ನೋಡಿ ನೀವು ಜಗತ್ತನ್ನು ಗೆಲ್ಲುತ್ತೀರಿ ಎಂದು ಭಾವುಕರಾಗಿ ಹೇಳಿ ಮುತ್ತಿಟ್ಟಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral  Video) ಆಗುತ್ತಿದೆ.

ವೈರಲ್ ವೀಡಿಯೋದಲ್ಲಿ ಇರುವಂತೆ ಪ್ರಧಾನಿಯವರ ಚಿತ್ರದೊಂದಿಗೆ ಮಾತನಾಡುವಾಗ ರೈತ ಭಾವುಕರಾಗುವುದನ್ನು ಕಾಣಬಹುದು. “ಮೊದಲು ನನಗೆ 1,000 ಸಿಗುತ್ತಿತ್ತು ಮತ್ತು ನೀವು ಇನ್ನೂ 500 ಕೊಡಲು ನಿರ್ಧರಿಸಿದ್ದೀರಿ. ನಮ್ಮ ಮನೆಗಳು ಹಸಿರಾಗಿರಬೇಕು ಎಂದು ನೀವು ಹೇಳಿದ್ದೀರಿ. ನಮ್ಮ ಆರೋಗ್ಯಕ್ಕಾಗಿ 5 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದೀರಿ. ನಾನು ನಿಮ್ಮ ಪಾದಗಳಿಗೆ ನಮಸ್ಕರಿಸುತ್ತೇನೆ, ನೀವು ಜಗತ್ತು ಗೆಲ್ಲುತ್ತೀರಿ” ಎಂದು ಭಾವುಕರಾಗಿ ಭಾವಚಿತ್ರವನ್ನು ಸವರಿ ಕೆನ್ನೆಗೆ ಮುತ್ತಿಟ್ಟಿದ್ದಾರೆ.

ಇದನ್ನೂ ಓದಿ: Amit Shah: ಅಂದು ಮೋದಿ ಹೆಸರು ಹೇಳುವಂತೆ ಸಿಬಿಐ ಅಧಿಕಾರಿಗಳು ನನ್ನ ಮೇಲೆ ಒತ್ತಡ ಹಾಕಿದ್ದರು: ಅಮಿತ್ ಶಾ

ಈ ವಿಡಿಯೋವನ್ನು ಮೋಹನ್​ದಾಸ್ ಕಾಮತ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕರ್ನಾಟಕದ ರೈತರೊಬ್ಬರು ಮೋದಿ ಬಗ್ಗೆ ಅವರ ಆಳವಾದ ಪ್ರೀತಿಯನ್ನು ತೋರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ನಿನ್ನೆ (ಮಾರ್ಚ್ 29 ರಂದು) ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಈವರೆಗೆ ಸಾವಿರಾರು ವೀಕ್ಷಣೆಗಳನ್ನು ಪಡೆದಿದೆ. ವಿಡಿಯೋ ನೋಡಿದ ಒಂದಷ್ಟು ನೆಟ್ಟಿಗರು ರೈತನ ಪ್ರೀತಿಯನ್ನು ಹಾಗೂ ಮೋದಿಯವರನ್ನು ಹೊಗಳಿದ್ದಾರೆ.

ಪ್ರಧಾನಿ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ವರ್ಷಕ್ಕೆ 6 ಸಾವಿರ ರೂ. ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಆ ಮೂಲಕ ರೈತರಿಗೆ ಆರ್ಥಿಕ ಸಹಾಯ ಮಾಡಲಾಗುತ್ತಿದೆ. ಅದಾಗ್ಯೂ, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಮೂರು ಕೃಷಿ ಕಾಯ್ದೆಗಳಿಗೆ ರೈತರಿಂದ ಭಾರೀ ವಿರೋಧಗಳು ವ್ಯಕ್ತವಾಗಿದ್ದರೂ ಒಂದಷ್ಟು ಸಂಖ್ಯೆ ರೈತರು ಕಾಯ್ದೆಗಳನ್ನು ಬೆಂಬಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Thu, 30 March 23

Follow Us
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು