ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿ ಕಾಂಗ್ರೆಸ್ ಶಾಸಕ ಮಾಡಿದ್ದೇನು?

Updated on: Dec 29, 2025 | 7:57 PM

ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ ಶಾಸಕರ ಗಮನಕ್ಕೆ ಬಂದಾಗ ಅವರೇ ಮಧ್ಯಪ್ರವೇಶಿಸಿದರು. ಯಾವುದೇ ಸಮಸ್ಯೆ ಇದ್ದರೆ ನೋಟಿಸ್ ನೀಡಬೇಕು, ಆದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಏಕೆ? ಎಂದು ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ವಿದ್ಯುತ್ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದಾಗ ಅವರೂ ಸಹ ಅನುಭವಿಸುವಂತಾಗಲಿ ಎಂದು ಶಾಸಕರು ಆ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಹರಿದ್ವಾರ, ಡಿಸೆಂಬರ್ 29: ಉತ್ತರಾಖಂಡದ ಹರಿದ್ವಾರದ ಜಬ್ರೇರಾದ ಕಾಂಗ್ರೆಸ್ (Congress)  ಶಾಸಕ ವೀರೇಂದ್ರ ಜಾತಿ ಅವರು ತಮ್ಮ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ ನಂತರ ವಿದ್ಯುತ್ ಇಲಾಖೆಯ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದ್ದಾರೆ. ನಿವಾಸಿಗಳು ವಿದ್ಯುತ್ ಕಡಿತವನ್ನು ಎದುರಿಸಿದರೆ, ಅದಕ್ಕೆ ಕಾರಣರಾದವರು ಸಹ ವಿದ್ಯುತ್ ವ್ಯತ್ಯಯವನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ವೀರೇಂದ್ರ ಜಾತಿ ಹೇಳಿದ್ದಾರೆ.

ಈ ಘಟನೆಯ ವಿಡಿಯೋ ಎಕ್ಸ್​ನಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಕೆಲವು ಅಧಿಕಾರಿಗಳು ಹಲವಾರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ವಿಷಯ ಶಾಸಕರ ಗಮನಕ್ಕೆ ಬಂದಾಗ ಅವರೇ ಮಧ್ಯಪ್ರವೇಶಿಸಿದರು. ಯಾವುದೇ ಸಮಸ್ಯೆ ಇದ್ದರೆ ನೋಟಿಸ್ ನೀಡಬೇಕು, ಆದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಏಕೆ? ಎಂದು ಅವರು ತಮ್ಮ ಕೋಪವನ್ನು ವ್ಯಕ್ತಪಡಿಸಿದರು.

ವಿದ್ಯುತ್ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಕಡಿತಗೊಳಿಸಿದಾಗ ಅವರೂ ಸಹ ಅನುಭವಿಸುವಂತಾಗಲಿ ಎಂದು ಶಾಸಕರು ಆ ಅಧಿಕಾರಿಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಈ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 29, 2025 07:56 PM