ಎಂತೆಂಥಾ ಜನರಪ್ಪ! ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಸರಳನ್ನೂ ಕದ್ದ ಕಳ್ಳರು

Updated on: Aug 02, 2025 | 10:13 PM

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಚರಂಡಿಯ ಮುಚ್ಚಳವನ್ನು ಕದಿಯುತ್ತಿದ್ದ ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಚರಂಡಿಯ ಮುಚ್ಚಳವನ್ನು ಎತ್ತುತ್ತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಮತ್ತೊಬ್ಬ ವ್ಯಕ್ತಿ ಇ-ರಿಕ್ಷಾದಲ್ಲಿ ಬಂದ. ಇಬ್ಬರೂ ಕಳ್ಳರು ಕಬ್ಬಿಣದ ಮುಚ್ಚಳವನ್ನು ರಿಕ್ಷಾಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಆಗಸ್ಟ್ 1 ಮತ್ತು ಆಗಸ್ಟ್ 2ರ ಮಧ್ಯರಾತ್ರಿ ಭಾರತ್ ಗ್ಯಾಸ್ ಏಜೆನ್ಸಿ ಬಳಿಯ ಲಾಲ್ ಕುಯಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಘಾಜಿಯಾಬಾದ್, ಆಗಸ್ಟ್ 2: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಿಂದ ವಿಚಿತ್ರ ಘಟನೆ ಬೆಳಕಿಗೆ ಬಂದಿದ್ದು, ಕಳ್ಳರು ಚರಂಡಿಗೆ ಮುಚ್ಚಿದ್ದ ಕಬ್ಬಿಣದ ಮುಚ್ಚಳವನ್ನು ಕದ್ದಿದ್ದಾರೆ. ಈ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿಯಲ್ಲಿ (CCTV) ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇಬ್ಬರು ವ್ಯಕ್ತಿಗಳು ಚರಂಡಿಯ ಮುಚ್ಚಳವನ್ನು ಎತ್ತುತ್ತಿರುವುದನ್ನು ಕಾಣಬಹುದು. ಅಷ್ಟರಲ್ಲಿ ಮತ್ತೊಬ್ಬ ವ್ಯಕ್ತಿ ಇ-ರಿಕ್ಷಾದಲ್ಲಿ ಬಂದ. ಇಬ್ಬರೂ ಕಳ್ಳರು ಕಬ್ಬಿಣದ ಮುಚ್ಚಳವನ್ನು ರಿಕ್ಷಾಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಆಗಸ್ಟ್ 1 ಮತ್ತು ಆಗಸ್ಟ್ 2ರ ಮಧ್ಯರಾತ್ರಿ ಭಾರತ್ ಗ್ಯಾಸ್ ಏಜೆನ್ಸಿ ಬಳಿಯ ಲಾಲ್ ಕುಯಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More