ಬರಿಗೈಯಲ್ಲಿ ಚಿರತೆಯ ಕುತ್ತಿಗೆ ಹಿಡಿದ ಗ್ರಾಮಸ್ಥರು; ವಿಡಿಯೋಗೆ ನೆಟ್ಟಿಗರ ಬೇಸರ
ಉತ್ತರ ಪ್ರದೇಶದಲ್ಲಿ ಬರಿಗೈಯಲ್ಲಿ ಚಿರತೆಯನ್ನು ತಡೆದ ಗ್ರಾಮಸ್ಥರ ವರ್ತನೆಗೆ ನೆಟ್ಟಿಗರು ಬೇಸರಗೊಂಡಿದ್ದಾರೆ. ತಮ್ಮ ಊರಿಗೆ ಬಂದು ಕಾಟ ಕೊಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಚಿರತೆಯನ್ನು ಹಿಡಿದಿದ್ದಾರೆ.
ನೊಯ್ಡಾ: ಊರಿನೊಳಗೆ ಬಂದು ಕಾಟ ಕೊಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಅಧಿಕಾರಿಗಳು ವಿಫಲರಾದ ನಂತರ ಉತ್ತರ ಪ್ರದೇಶದ ಹಳ್ಳಿಯೊಂದರ ನಿವಾಸಿಗಳು ತಾವೇ ಚಿರತೆಯನ್ನು ಸೆರೆ ಹಿಡಿದು, ಅದರ ಕುತ್ತಿಗೆಯನ್ನು ಬರಿಗೈಯಲ್ಲಿ ಒತ್ತಿ ಹಿಡಿದು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಮಹಾರಾಜ್ಗಂಜ್ನ ಲಾಲ್ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವೀಡಿಯೋದಲ್ಲಿ ಯುವಕರು ಚಿರತೆಯ ಕುತ್ತಿಗೆಗೆ ಕೈ ಹಾಕಿ ನಿಂತಿರುವುದನ್ನು ನೋಡಬಹುದು. ಆ ಚಿರತೆ ತೀವ್ರವಾಗಿ ಭಯಗೊಂಡಂತೆ ಕಾಣಿಸಿತು. ಈ ಘಟನೆಯ ನಂತರ ಅರಣ್ಯ ಇಲಾಖೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಚಿರತೆಯೊಂದಿಗೆ ಗ್ರಾಮಸ್ಥರು ತಿರುಗಾಡುತ್ತಿರುವ ವಿಡಿಯೋ ಆನ್ಲೈನ್ನಲ್ಲಿ ಅನೇಕ ನೆಟಿಜನ್ಗಳನ್ನು ಕೆರಳಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

