Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ
ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು.
ಮಂಗಳೂರು: ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು. ಈ ವೇಳೆ ಅಲ್ಲಿಯೇ ನೆಲದಲ್ಲಿ ಕುಳಿತು ಮಗುವೊಂದು ಸ್ವೀಟ್ ಕಾರ್ನ್ ತಿನ್ನುತ್ತಾ ನೇಮ ವೀಕ್ಷಿಸುತಿತ್ತು. ಈ ಮಗುವನ್ನು ಕಂಡು ಅಲ್ಲಿಗೆ ಬಂದ ಕಾಂತೇರಿ ಜುಮಾದಿ ದೈವ ತನಗೂ ತಿನಿಸು ಕೊಡುವಂತೆ ಕೈ ಚಾಚಿದೆ. ದೈವ ತನ್ನಲ್ಲಿಗೆ ಬಂದಾಗ ಕೊಂಚವೂ ಭೀತಿಗೊಳಗಾಗದ ಮಗು ಮುಗ್ಧತೆಯಿಂದ ಚಮಚದಲ್ಲಿ ಸ್ವೀಟ್ ಕಾರ್ನ್ ನೀಡಲು ಯತ್ನಿಸಿದೆ. ಈ ಸಂದರ್ಭ ಮಗುವಿನ ಮುಗ್ಧತೆಗೆ ತಲೆದೂಗಿದ ದೈವ ತನ್ನ ಹಣೆಯ ಬಣ್ಣವನ್ನೇ ಆರ್ಶೀವಾದ ರೂಪದಲ್ಲಿ ಮಗುವಿನ ಹಣೆಗೆ ತಿಲಕವಿರಿಸಿದೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

