Viral Video: ತಿನಿಸು ಕೊಡುವಂತೆ ಕೈ ಚಾಚಿದ ದೈವಕ್ಕೆ ಮಗು ಮಾಡಿದ್ದೇನು? ಮುಗ್ಧತೆಗೆ ತಲೆದೂಗಿದ ದೈವ

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 28, 2023 | 4:06 PM

ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು.

ಮಂಗಳೂರು: ಮಗುವಿನ ಮುಗ್ಧ ಪ್ರೀತಿಗೆ ದೈವ ಮನಸೋತ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಬಜ್ಜೋಡಿಯಲ್ಲಿ ನಡೆದ ದೊಂಪದಬಲಿಯಲ್ಲಿ ಕಾಂತೇರಿ ಜುಮಾದಿ ದೈವವು ಬೇಟೆಯ ಪರಿಕಲ್ಪನೆಯನ್ನು ನರ್ತನದ ಮೂಲಕ ಬಿಂಬಿಸುತಿತ್ತು. ಈ ವೇಳೆ ಅಲ್ಲಿಯೇ ನೆಲದಲ್ಲಿ ಕುಳಿತು ಮಗುವೊಂದು ಸ್ವೀಟ್ ಕಾರ್ನ್ ತಿನ್ನುತ್ತಾ ನೇಮ ವೀಕ್ಷಿಸುತಿತ್ತು. ಈ ಮಗುವನ್ನು ಕಂಡು ಅಲ್ಲಿಗೆ ಬಂದ ಕಾಂತೇರಿ ಜುಮಾದಿ ದೈವ ತನಗೂ ತಿನಿಸು ಕೊಡುವಂತೆ ಕೈ ಚಾಚಿದೆ. ದೈವ ತನ್ನಲ್ಲಿಗೆ ಬಂದಾಗ ಕೊಂಚವೂ ಭೀತಿಗೊಳಗಾಗದ ಮಗು ಮುಗ್ಧತೆಯಿಂದ ಚಮಚದಲ್ಲಿ ಸ್ವೀಟ್ ಕಾರ್ನ್ ನೀಡಲು ಯತ್ನಿಸಿದೆ. ಈ ಸಂದರ್ಭ ಮಗುವಿನ ಮುಗ್ಧತೆಗೆ ತಲೆದೂಗಿದ ದೈವ ತನ್ನ ಹಣೆಯ ಬಣ್ಣವನ್ನೇ ಆರ್ಶೀವಾದ ರೂಪದಲ್ಲಿ ಮಗುವಿನ ಹಣೆಗೆ ತಿಲಕವಿರಿಸಿದೆ. ಈ ವಿಡಿಯೋ ಸಖತ್​ ವೈರಲ್​ ಆಗಿದೆ.

Follow us on