Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೊಂಬಾಟ್’; ಆರ್​ಸಿಬಿ ಅಭಿಮಾನಿಗಳ ಬಗ್ಗೆ ಹೃದಯವಂತ ಕೊಹ್ಲಿ ಹೇಳಿದ್ದೇನು? ವಿಡಿಯೋ ನೋಡಿ

‘ಬೊಂಬಾಟ್’; ಆರ್​ಸಿಬಿ ಅಭಿಮಾನಿಗಳ ಬಗ್ಗೆ ಹೃದಯವಂತ ಕೊಹ್ಲಿ ಹೇಳಿದ್ದೇನು? ವಿಡಿಯೋ ನೋಡಿ

ಪೃಥ್ವಿಶಂಕರ
|

Updated on:Mar 17, 2025 | 10:46 PM

RCB Unbox Event: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಈವೆಂಟ್​ನಲ್ಲಿ ಹೊಸ ನಾಯಕನನ್ನು ಘೋಷಿಸಲಾಯಿತು. ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು. ವಿರಾಟ್ ಕೊಹ್ಲಿ ಅವರು ಆರ್‌ಸಿಬಿ ಅಭಿಮಾನಿಗಳನ್ನು "ಬೊಂಬಾಟ್" ಎಂದು ಕರೆದರು.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ತಂಡದ ನೂತನ ನಾಯಕನನ್ನು ಅಧಿಕೃತವಾಗಿ ಘೋಷಿಸಲಾಯಿತು. ಹಾಗೆಯೇ ಕರ್ನಾಟಕ ರತ್ನ ಪುನೀತ್​ ರಾಜ್​ಕುಮಾರ್​ ಅವರಿಗೆ ಅವರ ಜನ್ಮದಿನದಂದು ವಿಶೇಷ ಗೌರವವನ್ನು ಸಲ್ಲಿಸಲಾಯಿತು. ಇದೇ ವೇಳೆ ಆರ್​ಸಿಬಿಯ ಜೀವನಾಡಿಯಾಗಿರುವ ವಿರಾಟ್ ಕೊಹ್ಲಿಯ ಬಳಿ ಆರ್​ಸಿಬಿ ಅಭಿಮಾನಿಗಳನ್ನು ಒಂದು ಪದದಲ್ಲಿ ವಿಶ್ಲೇಷಿಸಿ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಕೊಹ್ಲಿ ಕನ್ನಡದಲ್ಲಿಯೇ ’ಬೊಂಬಾಟ್’ ಎಂಬ ಉತ್ತರವನ್ನು ನೀಡಿದರು. ಕಿಂಗ್ ಕೊಹ್ಲಿ ಈ ಮಾತನ್ನು ಹೇಳಿದ ಕೂಡಲೇ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 17, 2025 10:43 PM