‘ಬೊಂಬಾಟ್’; ಆರ್ಸಿಬಿ ಅಭಿಮಾನಿಗಳ ಬಗ್ಗೆ ಹೃದಯವಂತ ಕೊಹ್ಲಿ ಹೇಳಿದ್ದೇನು? ವಿಡಿಯೋ ನೋಡಿ
RCB Unbox Event: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಈವೆಂಟ್ನಲ್ಲಿ ಹೊಸ ನಾಯಕನನ್ನು ಘೋಷಿಸಲಾಯಿತು. ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು. ವಿರಾಟ್ ಕೊಹ್ಲಿ ಅವರು ಆರ್ಸಿಬಿ ಅಭಿಮಾನಿಗಳನ್ನು "ಬೊಂಬಾಟ್" ಎಂದು ಕರೆದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ತಂಡದ ನೂತನ ನಾಯಕನನ್ನು ಅಧಿಕೃತವಾಗಿ ಘೋಷಿಸಲಾಯಿತು. ಹಾಗೆಯೇ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರಿಗೆ ಅವರ ಜನ್ಮದಿನದಂದು ವಿಶೇಷ ಗೌರವವನ್ನು ಸಲ್ಲಿಸಲಾಯಿತು. ಇದೇ ವೇಳೆ ಆರ್ಸಿಬಿಯ ಜೀವನಾಡಿಯಾಗಿರುವ ವಿರಾಟ್ ಕೊಹ್ಲಿಯ ಬಳಿ ಆರ್ಸಿಬಿ ಅಭಿಮಾನಿಗಳನ್ನು ಒಂದು ಪದದಲ್ಲಿ ವಿಶ್ಲೇಷಿಸಿ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಕೊಹ್ಲಿ ಕನ್ನಡದಲ್ಲಿಯೇ ’ಬೊಂಬಾಟ್’ ಎಂಬ ಉತ್ತರವನ್ನು ನೀಡಿದರು. ಕಿಂಗ್ ಕೊಹ್ಲಿ ಈ ಮಾತನ್ನು ಹೇಳಿದ ಕೂಡಲೇ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 17, 2025 10:43 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

