IND vs AUS, World Cup Final: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಲು ನಿರಾಕರಿಸಿದ ಕೊಹ್ಲಿ: ರವಿ ಶಾಸ್ತ್ರಿ ಏನು ಮಾಡಿದ್ರು ನೋಡಿ

Virat Kohli Post Match interview: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಭಾರತೀಯರು ದುಃಖದಲ್ಲಿ ಮುಳುಗಿದ್ದರು. ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸ್ವೀಕರಿಸಲು ರವಿ ಶಾಸ್ತ್ರಿ, ವಿರಾಟ್​ರನ್ನು ಕರೆದಾಗ ಕೊಹ್ಲಿ ಪ್ರಶಸ್ತಿ ಪಡೆದು ಮಾತನಾಡಲು ನಿರಾಕರಿಸಿದರು.

IND vs AUS, World Cup Final: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಲು ನಿರಾಕರಿಸಿದ ಕೊಹ್ಲಿ: ರವಿ ಶಾಸ್ತ್ರಿ ಏನು ಮಾಡಿದ್ರು ನೋಡಿ
|

Updated on: Nov 20, 2023 | 12:49 PM

ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ತೆರೆಬಿದ್ದಾಗಿದೆ. ಒಂದೂವರೆ ತಿಂಗಳ ಕಾಲ ರೋಹಿತ್ ಶರ್ಮಾ (Rohit Sharma) ತಂಡ ಅಮೋಘವಾಗಿ ಆಡಿ ಫೈನಲ್​ಗೆ ತಲುಪಿತು. 10 ಪಂದ್ಯಗಳಲ್ಲಿ 10 ರಲ್ಲೂ ಗೆಲುವು ಸಾಧಿಸಿ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಫೈನಲ್​ನಲ್ಲಿ ಆಗಿದ್ದೇ ಬೇರೆ. ಆರಂಭದಲ್ಲಿ ಟಾಸ್ ಸೋತ ಭಾರತ ನಂತರ ಬ್ಯಾಟಿಂಗ್-ಬೌಲಿಂಗ್​ನಲ್ಲಿ ವೈಫಲ್ಯ ಅನುಭವಿಸಿ ಟ್ರೋಫಿ ಗೆಲ್ಲುವ ಆಸೆ ಕೈಚೆಲ್ಲಿತು. ಆಸ್ಟ್ರೇಲಿಯಾ ಗೆಲ್ಲುತ್ತಿದ್ದಂತೆ ಭಾರತೀಯ ಆಟಗಾರರು ಹಾಗೂ ಅಭಿಮಾನಿಗಳು ಬೇಸರಗೊಂಡರು. ಕೆಲ ಪ್ಲೇಯರ್ಸ್ ಕಣ್ಣೀರಿಟ್ಟ ಘಟನೆ ಕೂಡ ನಡೆಯಿತು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆಯೂ ಭಾರತೀಯರು ದುಃಖದಲ್ಲಿ ಮುಳುಗಿದ್ದರು. ನಾಯಕ ರೋಹಿತ್ ಶರ್ಮಾ ಹೆಚ್ಚು ಮಾತನಾಡಲಿಲ್ಲ. ಬಳಿಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸ್ವೀಕರಿಸಲು ರವಿ ಶಾಸ್ತ್ರಿ, ವಿರಾಟ್ ಕೊಹ್ಲಿಯನ್ನು ಕರೆದರು. ಆದರೆ, ಕೊಹ್ಲಿ ಪ್ರಶಸ್ತಿ ಪಡೆದು ಮಾತನಾಡಲು ನಿರಾಕರಿಸಿದರು. ಕೊಹ್ಲಿಯ ಭಾವನೆಗೆ ಬೆಲೆಕೊಟ್ಟ ಶಾಸ್ತ್ರಿ ತೊಂದರೆಯಿಲ್ಲ ಎಂದು ಕೈಸನ್ನೆ ಮಾಡಿದರು. ಇದರ ವಿಡಿಯೋ ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ