ರೆಡಿನಾ… ಮೊದಲ ಓವರ್​ ನಂದೇ! RCB ಫ್ಯಾನ್ಸ್​ಗೆ ಶಾಕ್ ನೀಡಿದ ಕೊಹ್ಲಿ

Updated on: May 27, 2026 | 11:56 AM

IPL 2026 RCB vs GT: ಐಪಿಎಲ್​ನ ಕ್ವಾಲಿಫೈಯರ್-1 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 254 ರನ್​ ಕಲೆಹಾಕಿದ್ದರು.

ಅದರಂತೆ 255 ರನ್​ಗಳ ಗುರಿ ಬೆನ್ನತ್ತಲು ಬಂದ ಗುಜರಾತ್ ಟೈಟಾನ್ಸ್ ಬ್ಯಾಟರ್​ಗಳನ್ನು ನೋಡಿ ವಿರಾಟ್ ಕೊಹ್ಲಿ ಚೆಂಡನ್ನು ಕೈಗೆತ್ತಿ ಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂಪೈರ್​ಗೆ ಕ್ಯಾಪ್ ನೀಡಿ ಮೊದಲ ಓವರ್​ ನಾನೇ ಎಸೆಯುತ್ತಿದ್ದೇನೆ ಎಂದು ಹೆಜ್ಜೆಗಳನ್ನು ಅಳೆಯುತ್ತಾ (ರನ್-ಅಪ್ ಮಾರ್ಕಿಂಗ್) ಸಾಗಿದರು.

ಇದನ್ನು ನೋಡಿದ ತಕ್ಷಣ ಇಡೀ ಕ್ರೀಡಾಂಗಣದಲ್ಲಿದ್ದ ಅಭಿಮಾನಿಗಳಿಗೆ ಮತ್ತು ಕಾಮೆಂಟೇಟರ್‌ಗಳಿಗೆ ಶಾಕ್. ಏಕೆಂದರೆ ವಿರಾಟ್ ಕೊಹ್ಲಿ ಈ ಹಿಂದೆ ಓವರ್ ಎಸೆದಾಗ ಏನಾಗಿತ್ತು ಎಂಬುದು ಎಲ್ಲರಿಗೂ ಚೆನ್ನಾಗಿ ನೆನಪಿದೆ.

2012 ರ ಐಪಿಎಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 205 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಗುರಿ ಬೆನ್ನಟ್ಟಿದ ಸಿಎಸ್‌ಕೆಗೆ ಕೊನೆಯ 2 ಓವರ್‌ಗಳಲ್ಲಿ ಗೆಲ್ಲಲು 43 ರನ್‌ಗಳ ಅಗತ್ಯವಿತ್ತು. ಈ ವೇಳೆ ದಾಳಿಗಿಳಿದ ವಿರಾಟ್ ಕೊಹ್ಲಿ ಒಂದೇ ಓವರ್​ನಲ್ಲಿ ಬರೋಬ್ಬರಿ 28 ರನ್ ನೀಡಿದ್ದರು.

ಅಂದು ಸಿಎಸ್​ಕೆ ತಂಡದ ಆಟಗಾರ ಅಲ್ಬಿ ಮೊರ್ಕೆಲ್, ಕೊಹ್ಲಿ ಎಸೆದ ಆ 19ನೇ ಓವರ್‌ನಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 2 ಫೋರ್​ಗಳನ್ನು ಚಚ್ಚಿದ್ದರು. ಪರಿಣಾಮ ಆ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿತ್ತು,

ಇದಾದ ಬಳಿಕ ಬೌಲಿಂಗ್​ನಿಂದ ದೂರವೇ ಉಳಿದಿದ್ದ ವಿರಾಟ್ ಕೊಹ್ಲಿ ಇದಕ್ಕಿದ್ದಂತೆ ಚೆಂಡೆದು ಹಿಡಿದು ಎಲ್ಲರಿಗೂ ಶಾಕ್ ನೀಡಿದರು. ಆದರೆ ಕೆಲವೇ ಕ್ಷಣಗಳಲ್ಲಿ ಜೇಕಬ್ ಡಫಿಗೆ ಚೆಂಡನ್ನು ಹಸ್ತಾಂತರಿಸಿ ಎಲ್ಲರ ಗೊಂದಲ್ಕೆ ತೆರೆ ಎಳೆದರು. ಇದೀಗ ವಿರಾಟ್ ಕೊಹ್ಲಿ ಈ ಕೀಟಲೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್​ಗಳಲ್ಲಿ 254 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ 19.3 ಓವರ್​ಗಳಲ್ಲಿ 162 ರನ್​​ಗಳಿಗೆ ಆಲೌಟ್ ಆಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 92 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More