Vishnuvardhan Memorial: ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಬೆಂಗಳೂರಿಂದ ಮೈಸೂರಿಗೆ ಹೊರಟ ಜನಸಾಗರ
Vishnuvardhan Memorial Inauguration: ವಿಷ್ಣುವರ್ಧನ್ ಅಭಿಮಾನಿಗಳು ಸಾವಿರಾರು ವಾಹನಗಳಲ್ಲಿ ಜಾಥಾ ಹೊರಟಿದ್ದಾರೆ. ನೆಚ್ಚಿನ ನಟನ ಫೋಟೋ ಹಿಡಿದು, ಜೈಕಾರ ಕೂಗುತ್ತ ಅಭಿಮಾನ ಮೆರೆಯಲಾಗುತ್ತಿದೆ.
ಕನ್ನಡ ಚಿತ್ರರಂಗದ ಮೇರು ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸ್ಮಾರಕದ (Vishnuvardhan Memorial) ಉದ್ಘಾಟನಾ ಸಮಾರಂಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗಿ ಆಗುತ್ತಿದ್ದಾರೆ. ಮೈಸೂರಿನ ಎಚ್.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಇಂದು (ಜ.29) ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷ್ಣುವರ್ಧನ್ ಸ್ಮಾರಕ (Vishnuvardhan Smaraka) ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಜನಸಾಗರವೇ ಮೈಸೂರಿನತ್ತ ಸಾಗುತ್ತಿದೆ. ಸಾವಿರಾರು ವಾಹನಗಳಲ್ಲಿ ಅಭಿಮಾನಿಗಳು (Vishnuvardhan Fans) ಜಾಥಾ ಹೊರಟಿದ್ದಾರೆ. ವಿಷ್ಣುವರ್ಧನ್ ಅವರ ಫೋಟೋ ಹಿಡಿದು, ಜೈಕಾರ ಕೂಗುತ್ತ ಅಭಿಮಾನ ಮೆರೆಯಲಾಗುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:36 am, Sun, 29 January 23