Vishnuvardhan Memorial: ವಿಷ್ಣುವರ್ಧನ್​ ಸ್ಮಾರಕ ಲೋಕಾರ್ಪಣೆ: ಬೆಂಗಳೂರಿಂದ ಮೈಸೂರಿಗೆ ಹೊರಟ ಜನಸಾಗರ

|

Updated on: Jan 29, 2023 | 10:36 AM

Vishnuvardhan Memorial Inauguration: ವಿಷ್ಣುವರ್ಧನ್ ಅಭಿಮಾನಿಗಳು ಸಾವಿರಾರು ವಾಹನಗಳಲ್ಲಿ ಜಾಥಾ ಹೊರಟಿದ್ದಾರೆ. ನೆಚ್ಚಿನ ನಟನ​ ಫೋಟೋ ಹಿಡಿದು, ಜೈಕಾರ ಕೂಗುತ್ತ ಅಭಿಮಾನ ಮೆರೆಯಲಾಗುತ್ತಿದೆ.

ಕನ್ನಡ ಚಿತ್ರರಂಗದ ಮೇರು ನಟ ‘ಸಾಹಸ ಸಿಂಹ’ ವಿಷ್ಣುವರ್ಧನ್​ ಅವರ ಸ್ಮಾರಕದ (Vishnuvardhan Memorial) ಉದ್ಘಾಟನಾ ಸಮಾರಂಭದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗಿ ಆಗುತ್ತಿದ್ದಾರೆ. ಮೈಸೂರಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಇಂದು (ಜ.29) ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಷ್ಣುವರ್ಧನ್​ ಸ್ಮಾರಕ (Vishnuvardhan Smaraka) ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಜನಸಾಗರವೇ ಮೈಸೂರಿನತ್ತ ಸಾಗುತ್ತಿದೆ. ಸಾವಿರಾರು ವಾಹನಗಳಲ್ಲಿ ಅಭಿಮಾನಿಗಳು (Vishnuvardhan Fans) ಜಾಥಾ ಹೊರಟಿದ್ದಾರೆ. ವಿಷ್ಣುವರ್ಧನ್​ ಅವರ ಫೋಟೋ ಹಿಡಿದು, ಜೈಕಾರ ಕೂಗುತ್ತ ಅಭಿಮಾನ ಮೆರೆಯಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:36 am, Sun, 29 January 23

Follow us on