ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್

Updated on: Aug 11, 2025 | 8:06 PM

‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ಸಮಾಧಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ಧ್ವಂಸ ಮಾಡಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೌನ ತಾಳಿದೆ ಎಂದು ವಿಷ್ಣು ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಟ ವಿಷ್ಣುವರ್ಧನ್ ಅವರ ಸಮಾಧಿ (Vishnuvardhan Samadhi) ಧ್ವಂಸ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ಸಮಾಧಿಯನ್ನು ಇತ್ತೀಚೆಗೆ ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಆದರೆ ಈ ವಿಚಾರದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಮೌನ ತಾಳಿದೆ ಎಂದು ಅಭಿಮಾನಿಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಎದುರು ವಿಷ್ಣುವರ್ಧನ್ ಅಭಿಮಾನಿಗಳು ಅಳಲು ತೋಡಿಕೊಂಡಿದ್ದಾರೆ. ‘ನಿಮ್ಮಿಂದಲೇ ನಮಗೆ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್ ಹೇಳಿದ್ದಾರೆ. ಅವರಿಗೆ ಸಾ.ರಾ. ಗೋವಿಂದು (Sa Ra Govindu) ಭರವಸೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More