ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೇವಲ ಸ್ಪೀಕರ್ ಅಲ್ಲ ವಿರೋಧ ಪಕ್ಷದ ನಾಯಕನಾಗುವ ಅರ್ಹತೆಯೂ ಇದೆ: ಯುಟಿ ಖಾದರ್
ಆಡಳಿತ ಪಕ್ಷದ ಸದಸ್ಯರ ಒತ್ತಡದ ನಡುವೆಯೂ ಅವರು ವಿರೋಧ ಪಕ್ಷಗಳ ಸದಸ್ಯರಿಗೆ ಸದನದಲ್ಲಿ ಮಾತಾಡಲು ಸಮಾನ ಅವಕಾಶ ನೀಡಿದರು ಎಂದು ಖಾದರ್ ಹೇಳಿದರು.
ಬೆಂಗಳೂರು: ವಿಧಾನ ಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕರಾಗಿರುವ ಯುಟಿ ಖಾದರ್ (UT Khader) ಅವರು ಅಧಿವೇಶನದ ಕೊನೆಯ ದಿನವಾದ ಇಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರನ್ನು ಹಾಡಿ ಹೊಗಳಿದರು. ಆಡಳಿತ ಪಕ್ಷದ ಸದಸ್ಯರ ಒತ್ತಡದ ನಡುವೆಯೂ ಅವರು ವಿರೋಧ ಪಕ್ಷಗಳ ಸದಸ್ಯರಿಗೆ ಸದನದಲ್ಲಿ ಮಾತಾಡಲು ಸಮಾನ ಅವಕಾಶ ನೀಡಿದರು ಎಂದು ಖಾದರ್ ಹೇಳಿದರು. ಕಾಗೇರಿ ಅವರಿಗೆ ಕೇವಲ ಸ್ಪೀಕರ್ (Speaker) ಮಾತ್ರ ಅಲ್ಲ ವಿರೋಧ ಪಕ್ಷದ ನಾಯಕರಾಗುವ ಅರ್ಹತೆ ಕೂಡ ಇದೆ ಎಂದು ಖಾದರ್ ಹೇಳಿದಾಗ ಆಡಳಿತ ಪಕ್ಷದ ಸದಸ್ಯರೊಬ್ಬರು ವಿರೋಧ ಪಕ್ಷದ ನಾಯಕ ಅಲ್ಲ ಮುಖ್ಯಮಂತ್ರಿ ಅನ್ನಿ ಅಂತ ಹೇಳಿದಾಗ ಅವರು ಮುಗುಳ್ನಗುತ್ತಾ ಮುಂದೆ ನೀವು ಯಾವತ್ತಾದರೂ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕಾಗೇರಿ ಅವರು ಯೋಗ್ಯ ಮತ್ತು ಸೂಕ್ತ ವ್ಯಕ್ತಿಯಾಗಿರುತ್ತಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?

ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್ ಜಾಮ್

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..

ಟಿವಿ9 ನೆಟ್ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
