ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು

ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಅವನ ಮೇಲೆ ವಾಹನ ಹರಿಸುವುದನ್ನು ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಬಿಳಿಕಾರಲ್ಲಿದ್ದ ಇಬ್ಬರು ಯುವಕರು ಓಡಿಬಂದು ನೆಲಕ್ಕೆ ಬಿದ್ದವನ ಮೇಲೆ ಆಯುಧಗಳಿಂದ ಪ್ರಹಾರ ನಡೆಸುತ್ತಾರೆ. ಕಪ್ಪು ಬಣ್ಣದ ಕಾರಲ್ಲಿದ್ದ ಯುವಕರು ಹೊರ ಬರುತ್ತಿದ್ದಂತೆಯೇ ಅವರಿಬ್ಬರು ಪರಾರಿಯಾಗುತ್ತಾರೆ.

ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು
|

Updated on:May 25, 2024 | 12:59 PM

ಉಡುಪಿ:ಕಳೆದ ಶನಿವಾರ (ಮೇ 18) ಉಡುಪಿ (Udupi) ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ (gang war) ಬಗ್ಗೆ ನಾವು ವರದಿ ಮಾಡಿದ್ದೇವೆ. ಅವತ್ತು ನಡುರಸ್ತೆಯಲ್ಲಿ ನಡೆದ ಹೊಡೆದಾಟದ ದೃಶ್ಯ ಮೊಬೈಲ್ ಫೊನೊಂದರಲ್ಲಿ ಸೆರೆಯಾಗಿದ್ದು ನಮಗೆ ಲಭ್ಯವಾಗಿವೆ. ದೃಶ್ಯಗಳು ಭಯಾನಕವಾಗಿವೆ (dreadful). ಯುವಕರ ಕೈಯಲ್ಲಿ ಮಚ್ಚು, ಲಾಂಗ್​ಗಳಿರುವುದನ್ನು ನೋಡಬಹುದು. ಬಿಳಿ ಬಣ್ಣದ ಕಾರಲ್ಲಿರುವವರು ಕಪ್ಪುಬಣ್ಣದ ಕಾರನಲ್ಲಿದ್ದ ವ್ಯಕ್ತಿ ಲಾಂಗ್ ಹಿಡಿದು ದಾಳಿ ಮಾಡಲು ಬಂದಾಗ ಅವನ ಮೇಲೆ ವಾಹನ ಹರಿಸುವುದನ್ನು ಮತ್ತು ಅವನು ಅಂಗಾತ ನೆಲಕ್ಕೆ ಬೀಳುವುದು ಕಾಣಿಸುತ್ತದೆ. ಬಿಳಿಕಾರಲ್ಲಿದ್ದ ಇಬ್ಬರು ಯುವಕರು ಓಡಿಬಂದು ನೆಲಕ್ಕೆ ಬಿದ್ದವನ ಮೇಲೆ ಆಯುಧಗಳಿಂದ ಪ್ರಹಾರ ನಡೆಸುತ್ತಾರೆ. ಕಪ್ಪು ಬಣ್ಣದ ಕಾರಲ್ಲಿದ್ದ ಯುವಕರು ಹೊರ ಬರುತ್ತಿದ್ದಂತೆಯೇ ಅವರಿಬ್ಬರು ಪರಾರಿಯಾಗುತ್ತಾರೆ. ಒಬ್ಬ ಓಡಿ ಹೋಗಿ ಬಿಳಿ ಕಾರು ಹತ್ತುತ್ತಾನೆ ಮತ್ತೊಬ್ಬ ಫೆನ್ಸಿಂಗ್ ಹಾರಿ ಕೆಮೆರಾ ಇರುವ ಕಡೆ ಓಡಿ ಬರುತ್ತಾನೆ. ನಂತರ ಕಪ್ಪು ಕಾರಿನಲಿದ್ದ ಗ್ಯಾಂಗ್ ಕೆಳಗೆ ಬಿದ್ದವನನ್ನು ಕಾರಲ್ಲಿ ಎಳೆದುಕೊಂಡು ಅಲ್ಲಿಂದ ಕಣ್ಮರೆಯಾಗುತ್ತಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ಯಾಂಗ್​ನ ಆಶಿಕ್ ಮತ್ತು ರಾಕಿಬ್ ಹೆಸರಿನ ಯುವಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆಶಿಕ್ ಕಾಪು ಮೂಲದವನು ಮತ್ತು ರಾಕಿಬ್ ಗುಜ್ಜರಬೆಟ್ಟದವನೆಂದು ಪೊಲೀಸರು ಹೇಳಿದ್ದಾರೆ. ಇದೇ ವಿಡಿಯೋ ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಬಳಕೆಯಾಗಿದ್ದ 2 ಕಾರು, ಒಂದು ಬೈಕ್, ತಲ್ವಾರ್ ಹಾಗೂ ಡ್ಯಾಗರ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವಿವಾಹ ಸಮಾರಂಭದಲ್ಲಿ ಪಾಕಿಸ್ತಾನದ ಗ್ಯಾಂಗ್​ಸ್ಟರ್​ ಅಮೀರ್ ಬಾಲಾಜ್ ಟಿಪ್ಪುವನ್ನು ಗುಂಡಿಕ್ಕಿ ಹತ್ಯೆ

Published On - 11:31 am, Sat, 25 May 24

Follow us
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ
ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ
ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ
ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ
ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ
ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ