ಮತದಾನ ಹಕ್ಕು ಬಹಳ ಮುಖ್ಯ, ಅದನ್ನು ಉಳಿಸುವ ಪ್ರಯತ್ನ ರಾಹುಲ್ ಮಾಡುತ್ತಿದ್ದಾರೆ: ಸುರೇಶ್
ನ್ಯಾಯಾಲಯಗಳು ಇವೆ ಅಂದಾಕ್ಷಣ ಎಲ್ಲಾದಕ್ಕೂ ಅವುಗಳ ಮುಂದೆ ಹೋಗಿ ನಿಂತುಕೊಳ್ಳಲಾಗಲ್ಲ, ಚುನಾವಣೆಯಲ್ಲಿ ನಡೆದ ಅಕ್ರಮಗಳಿಗೆ ಮೊದಲು ಆಯೋಗದಿಂದ ಸ್ಪಷ್ಟನೆ ಕೇಳಬೇಕು, ಅದು ನೀಡುವ ಸ್ಪಷ್ಟನೆ ಸಮಾಧಾನಕರವಾಗಿಲ್ಲವಾದರೆ ಅಥವಾ ಮನವಿಯನ್ನು ತಿರಸ್ಕರಿಸಿದರೆ ನ್ಯಾಯಾಲಯದ ಮೊರೆ ಹೊಗಬೇಕು, ರಾಹುಲ್ ಗಾಂಧಿಯವರು ಅದನ್ನೇ ಮಾಡುತ್ತಿದ್ದಾರೆ ಎಂದು ಡಿಕೆ ಸುರೇಶ್ ಹೇಳಿದರು.
ಬೆಂಗಳೂರು, ಆಗಸ್ಟ್ 02: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡೋದು ಪ್ರತಿಯೊಬ್ಬ ನಾಗರಿಕನ ಹಕ್ಕು (fundamental right), ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ನಿಮಿತ್ತ ಅದು ಹಾಳಾಗಬಾರದು ಅಂತ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿಯವರು ಹೋರಾಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು. ಕರ್ನಾಟಕದಲ್ಲೂ ಚುನಾವಣೆಗಳ ಸಂದರ್ಭದಲ್ಲಿ ಅಕ್ರಮಗಳು ನಡೆದಿರುವುದನ್ನು ರಾಹುಲ್ ಪತ್ತೆ ಮಾಡಿದ್ದಾರೆ, ಹಾಗಾಗಿ ಬೆಂಗಳೂರು ನಗರದಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸುರೇಶ್ ಹೇಳಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದನ್ನು ತಾನೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದೆ, ಅದರೆ ಎರಡೂ ಕಡೆಯಿಂದ ತನಗೆ ಜವಾಬು ಬಂದಿರಲಿಲ್ಲ ಎಂದು ಸುರೇಶ್ ಹೇಳಿದರು.
ಇದನ್ನೂ ಓದಿ: ಸುರ್ಜೇವಾಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಗೊತ್ತಿಲ್ಲವೆಂದ ಮಾಜಿ ಸಂಸದ ಡಿಕೆ ಸುರೇಶ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್

