AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ ಜಿಲ್ಲೆಯಲ್ಲಿ ರೈತರಿಗೆ ಸಿಗುತ್ತಿರುವ ಪರಿಹಾರದ ಮೊತ್ತವೂ ತನ್ನದೆನ್ನುತ್ತಿರುವ ವಕ್ಫ್ ಬೊರ್ಡ್!

ಯಾದಗಿರಿ ಜಿಲ್ಲೆಯಲ್ಲಿ ರೈತರಿಗೆ ಸಿಗುತ್ತಿರುವ ಪರಿಹಾರದ ಮೊತ್ತವೂ ತನ್ನದೆನ್ನುತ್ತಿರುವ ವಕ್ಫ್ ಬೊರ್ಡ್!

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 27, 2024 | 11:52 AM

Share

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ರೈತರು ವಕ್ಫ್ ಬೋರ್ಡ್ ನೋಟೀಸ್ ಗಳಿಂದ ಸಂಕಷ್ಟಕ್ಕೀಡಾಗಿದ್ದಾರೆ. ಬೇರೆ ಬೇರೆ ಇಲಾಖೆಗಳಿಂದ ರೈತರಿಗೆ ಸಿಗಬೇಕಿರುವ ಪರಿಹಾರದ ಮೊತ್ತ ತನ್ನದು ಅಂತ ವಕ್ಫ್ ಹೇಳಿರುವ ಹಲವಾರು ಪ್ರಕರಣಗಳು ಬಸನಗೌಡ ಯತ್ನಾಳ್, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ ಅವರನ್ನೊಳಗೊಂಡ ತಂಡಕ್ಕೆ ಎದುರಾಗುತ್ತಿವೆ.

ಯಾದಗಿರಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇಂದು ಯಾದಗಿರಿ ಜಿಲ್ಲೆಗೆ ಕಾಲಿರಿಸಿದೆ. ಜಿಲ್ಲೆಯಲ್ಲಿ ರಸ್ತೆ ಬದಿಯಿರುವ ಜಮೀನುಗಳಿಗೆ ಹೋಗಿ ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟೀಸ್ ಗಳ ಬಗ್ಗೆ ಯತ್ನಾಳ್ ತಂಡ ಮಾಹಿತಿ ಸಂಗ್ರಹಿಸುತ್ತಿದೆ. ಇಲ್ಲೊಬ್ಬ ರೈತನ ಜಮೀನು ಮೂಲಕ ರೇಲ್ವೇ ಟ್ರ್ಯಾಕ್ ಹಾದು ಹೋಗಲಿದೆ ಮತ್ತು ಇಲಾಖೆಯ ಭೂಸ್ವಾಧೀನ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಪರಿಹಾರದ ಮೊತ್ತವನ್ನೂ ವಿತರಿಸಿದೆ. ಅದರೆ ವಕ್ಫ್ ಬೋರ್ಡ್ ಪರಿಹಾರ ತನಗೆ ಸಿಗಬೇಕೆಂದು ದಾವೆ ಹೂಡಿದ ಕಾರಣ ಹಣ ನ್ಯಾಯಾಲಯದಲ್ಲೇ ಉಳಿದುಬಿಟ್ಟಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ವಕ್ಫ್ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ವಿಜಯೇಂದ್ರ ಯಾವತ್ತೂ ಭಾಗಿಯಾಗಿಲ್ಲ: ಯತ್ನಾಳ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More