ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​ ಆರೋಪ

ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​ ಆರೋಪ
| Updated By: ವಿವೇಕ ಬಿರಾದಾರ

Updated on: Oct 27, 2024 | 2:10 PM

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯಾ ತಾಲೂಕು ತಹಶೀಲ್ದಾರಗಳು ರೈತರಿಗೆ ನೋಟಿಸ್​ ನೀಡುತ್ತಿರುವುದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ, ಅಕ್ಟೋಬರ್​ 27: ವಕ್ಫ್​ ಮಂಡಳಿಯವರು (Vijayapura Waqf Board) ದೇವಸ್ಥಾನಕ್ಕೂ ಕೂಡ ನೋಟಿಸ್ ನೀಡುತ್ತಿದ್ದಾರೆ. ವಕ್ಫ್​ ಕಾನೂನು ವಿರುದ್ಧ ಹೋರಾಟ ಮಾಡುತ್ತೇವೆ. ಅಧಿಕಾರಿಗಳು ನೋಟಿಸ್ ನೀಡುತ್ತಿರುವುದಕ್ಕೆ ರೈತರು ಆತಂಕ ಪಡಬಾರದು, ಕಾನೂನು ಹೋರಾಟ ಮಾಡೋಣ. ನೋಟಿಸ್ ಬಂದರೆ ನಮ್ಮ ಕಚೇರಿ ಸಂಪರ್ಕ ಮಾಡಿ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ (Basangouda Patil Yatnal) ಯತ್ನಾಳ್​ ಹೇಳಿದರು.

ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಯ ರೈತರು ಸಹ ನಮ್ಮ ಕಚೇರಿ ಸಂಪರ್ಕ ಮಾಡಿ. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ರಚಿಸುತ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ರೈತರಿಗೆ ಉಚಿತ ಕಾನೂನು ನೆರವು ನೀಡುತ್ತೇವೆ. ಸಚಿವ ಜಮೀರ್ ಅಹಮದ್​ ಖಾನ್​ ಪ್ರವಾಸ ಮಾಡಿದ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದರು.

ವಕ್ಫ್​​ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ಜಿಲ್ಲೆಯಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ವಕ್ಫ್​ ಆಸ್ತಿ ಆಗಿಲ್ಲ ಎನ್ನುತ್ತಾರೆ. ವಕ್ಫ್​​ ಕಾನೂನು ನೆಹರು ಮಾಡಿರುವ ದೊಡ್ಡ ತಪ್ಪು. ಕರ್ನಾಟಕದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡಿದಕ್ಕೆ ವಕ್ಫ್​ ಕೆಲಸ ಮಾಡುತ್ತಿದೆ. ಈ ಹಿಂದೆ ವಿಜಯಪುರದ ಜಿಲ್ಲಾಧಿಕಾರಿಯಾಗಿದ್ದ ಮೊಹಮ್ಮದ್ ಮೋಹಸೀನ್ ರೈತರ ಜಮೀನು ಪಹಣಿಯಲ್ಲಿ ವಕ್ಫ್​​ ಹೆಸರು ಹಾಕಿ ಹೋಗಿದ್ದಾರೆ. ಅವರ ಮೇಲೆ ಕ್ರಮಕ್ಕಾಗಿ ಒತ್ತಾಯ ಮಾಡಿದ್ದೆ. ಆದರೆ, ನಮ್ಮವರೇ ಬಿಎಸ್​ ಯಡಿಯೂರಪ್ಪ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಆರೋಪ ಮಾಡಿದರು.

ವಿಜಯಪುರ ಜಿಲ್ಲೆಯ ಇಬ್ಬರು ಶಾಸಕರು ಮುಸ್ಲಿಂ ಪರವಾಗಿ ಕೆಲಸ ಮಾಡುತ್ತಾರೆ. ಮುಸ್ಲಿಂಮರ ನಾಯಕರಾಗಲು ಹೋಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
Daily Devotional: ಕನಸಿನಲ್ಲಿ ಅಕ್ಷತೆ ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಅಕ್ಷತೆ ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 28 ರಿಂದ ನವೆಂಬರ್​ 03ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
Nithya Bhavishya: ಈ ರಾಶಿಯವರು ಇಂದು ಆರ್ಥಿಕವಾಗಿ ಸಬಲರಾಗುತ್ತಾರೆ
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಕರುವನ್ನು ಇಡಿಯಾಗಿ ನುಂಗಿದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹರಿದ್ವಾರದ ಬೆಟ್ಟದಲ್ಲಿ ರೀಲ್ಸ್ ಮಾಡುವಾಗ ಆಳದ ಕಂದಕಕ್ಕೆ ಬಿದ್ದ ಮಹಿಳೆ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಹನುಮಂತನ ಕಂಡ್ರೆ ಯೋಗರಾಜ್​ ಭಟ್​ಗೆ ವಿಶೇಷ ಪ್ರೀತಿ
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಸಮನ್ವಯ ಸಭೆಯಲ್ಲಿ ಕಾಮರಾಡರೀ ಪ್ರದರ್ಶಿಸಿದ ವಿಜಯೇಂದ್ರ ಮತ್ತು ನಿಖಿಲ್
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ