ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​ ಆರೋಪ

Edited By: ವಿವೇಕ ಬಿರಾದಾರ

Updated on: Oct 27, 2024 | 2:10 PM

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯಾ ತಾಲೂಕು ತಹಶೀಲ್ದಾರಗಳು ರೈತರಿಗೆ ನೋಟಿಸ್​ ನೀಡುತ್ತಿರುವುದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಜಯಪುರ, ಅಕ್ಟೋಬರ್​ 27: ವಕ್ಫ್​ ಮಂಡಳಿಯವರು (Vijayapura Waqf Board) ದೇವಸ್ಥಾನಕ್ಕೂ ಕೂಡ ನೋಟಿಸ್ ನೀಡುತ್ತಿದ್ದಾರೆ. ವಕ್ಫ್​ ಕಾನೂನು ವಿರುದ್ಧ ಹೋರಾಟ ಮಾಡುತ್ತೇವೆ. ಅಧಿಕಾರಿಗಳು ನೋಟಿಸ್ ನೀಡುತ್ತಿರುವುದಕ್ಕೆ ರೈತರು ಆತಂಕ ಪಡಬಾರದು, ಕಾನೂನು ಹೋರಾಟ ಮಾಡೋಣ. ನೋಟಿಸ್ ಬಂದರೆ ನಮ್ಮ ಕಚೇರಿ ಸಂಪರ್ಕ ಮಾಡಿ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ (Basangouda Patil Yatnal) ಯತ್ನಾಳ್​ ಹೇಳಿದರು.

ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಯ ರೈತರು ಸಹ ನಮ್ಮ ಕಚೇರಿ ಸಂಪರ್ಕ ಮಾಡಿ. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ರಚಿಸುತ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ರೈತರಿಗೆ ಉಚಿತ ಕಾನೂನು ನೆರವು ನೀಡುತ್ತೇವೆ. ಸಚಿವ ಜಮೀರ್ ಅಹಮದ್​ ಖಾನ್​ ಪ್ರವಾಸ ಮಾಡಿದ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದರು.

ವಕ್ಫ್​​ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ಜಿಲ್ಲೆಯಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ವಕ್ಫ್​ ಆಸ್ತಿ ಆಗಿಲ್ಲ ಎನ್ನುತ್ತಾರೆ. ವಕ್ಫ್​​ ಕಾನೂನು ನೆಹರು ಮಾಡಿರುವ ದೊಡ್ಡ ತಪ್ಪು. ಕರ್ನಾಟಕದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡಿದಕ್ಕೆ ವಕ್ಫ್​ ಕೆಲಸ ಮಾಡುತ್ತಿದೆ. ಈ ಹಿಂದೆ ವಿಜಯಪುರದ ಜಿಲ್ಲಾಧಿಕಾರಿಯಾಗಿದ್ದ ಮೊಹಮ್ಮದ್ ಮೋಹಸೀನ್ ರೈತರ ಜಮೀನು ಪಹಣಿಯಲ್ಲಿ ವಕ್ಫ್​​ ಹೆಸರು ಹಾಕಿ ಹೋಗಿದ್ದಾರೆ. ಅವರ ಮೇಲೆ ಕ್ರಮಕ್ಕಾಗಿ ಒತ್ತಾಯ ಮಾಡಿದ್ದೆ. ಆದರೆ, ನಮ್ಮವರೇ ಬಿಎಸ್​ ಯಡಿಯೂರಪ್ಪ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಆರೋಪ ಮಾಡಿದರು.

ವಿಜಯಪುರ ಜಿಲ್ಲೆಯ ಇಬ್ಬರು ಶಾಸಕರು ಮುಸ್ಲಿಂ ಪರವಾಗಿ ಕೆಲಸ ಮಾಡುತ್ತಾರೆ. ಮುಸ್ಲಿಂಮರ ನಾಯಕರಾಗಲು ಹೋಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More