ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?

Updated on: Dec 03, 2024 | 9:13 PM

ಬಸನಗೌಡ ಪಾಟೀಲ್​ ಯತ್ನಾಳ್ ಮತ್ತು ಅವರ ತಂಡ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿದೆ.

ನವದೆಹಲಿ, (ಡಿಸೆಂಬರ್ 03): ಬಸನಗೌಡ ಪಾಟೀಲ್​ ಯತ್ನಾಳ್ ಮತ್ತು ಅವರ ತಂಡ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿದೆ. ನವದೆಹಲಿಯಲ್ಲಿಂದು ಯತ್ನಾಳ್ ತಂಡ ದಾಂಬಿಕಾ ಪಾಲ್ ಅವರನ್ನು ಭೇಟಿಯಾಗಿ ವಕ್ಫ್​ ವಿವಾದದ ವರದಿಯನ್ನು ಸಲಿಸಿತು.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅರವಿಂದ್​ ಲಿಂಬಾವಳಿ, ವಕ್ಫ್ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್​​ ಭೇಟಿಯಾಗಿದ್ದು, ಸುಮಾರು ಹೊತ್ತು ನಮ್ಮ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ವಿಜಯಪುರದಲ್ಲಿ ಯತ್ನಾಳ್ ಹೋರಾಟ ಸ್ಥಳಕ್ಕೆ ಪಾಲ್ ಬಂದಿದ್ರು. ಪಾಲ್ ಕೊಟ್ಟಂತಹ ಸಲಹೆ ಮೇರೆಗೆ ಪ್ರವಾಸ ಮಾಡಿದ್ದೆವು. ರಾಜ್ಯದ 7 ಜಿಲ್ಲೆಗಳಲ್ಲಿ ನಮ್ಮ ತಂಡ ಪ್ರವಾಸ ಮಾಡಿದೆ. ಪ್ರವಾಸದ ವರದಿಯನ್ನ ಈಗ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಕೇಸ್‌ ಟು ಕೇಸ್ ವರದಿ ಸಿದ್ಧಪಡಿಸಿ ಎಂದು ಸಲಹೆ ನೀಡಿದ್ದಾರೆ. ನಾವು ಅಧಿಕಾರಿಗಳಿಗೆ ನಾಳೆ ಸಂಪೂರ್ಣ ವರದಿ ಸಲ್ಲಿಸುತ್ತೇವೆ. ರೈತರು, ಮಠಾಧೀಶರಿಗೆ ಮಾತುಕೊಟ್ಟಂತೆ ವರದಿ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More