AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನವೀನ್ ಕುಮಾರ್ ಟಿ
| Edited By: |

Updated on: Feb 02, 2026 | 4:32 PM

Share

ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು ಹಿಂದೂಗಳು ಮಸೀದಿಯಲ್ಲಿ ಅಜಾನ್ ಕೂಗಿದರೆ ನಾವು ಹೀಗೆ ಕೇಳುತ್ತೀವಾ ಎಂದು ಪ್ರಶ್ನಿಸಿದ್ದಾರೆ. ಹೀಗೆ ಎರಡು ಗುಂಪಿನ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ದೇವಸ್ಥಾನದ ಪೂಜಾರಿ ನೀಡಿದ ದೂರಿನನ್ವಯ ದೊಡ್ಡಬಳ್ಳಾಪುರ ನಗರ ಪೊಲೀಸರಿಂದ ಎನ್ಸಿಆರ್ ದಾಖಲಾಗಿದ್ದು, ಎರಡು ಕಡೆಯವರಿಗೆ ಬುದ್ದಿವಾದ ಹೇಳಿ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.