ಹಿಂಡಲಗಾ ಕಾರಾಗೃಹದಲ್ಲಿ ಕೈದಿಯೊಬ್ಬನಿಂದ ವಾರ್ಡನ್ ಮೇಲೆ ಗಂಭೀರ ಹಲ್ಲೆ, ಬಿಮ್ಸ್​ನಲ್ಲಿ ಚಿಕಿತ್ಸೆ

ರಾಹಿಲ್​ ಹಾಸನದಿಂದ ಗಡೀಪಾರಾಗಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೈದಿ. ಇವನ ಹಿನ್ನೆಲೆ ಆಧಾರದಲ್ಲಿ ಜೈಲಿನ ಅತಿ ಭದ್ರತಾ ವಿಭಾಗದಲ್ಲಿ ಇರಿಸಲಾಗಿದೆಯಂತೆ. ಇಲ್ಲಿಗೆ ಬಂದಾಗಿನಿಂದ ಒಂದಿಲ್ಲೊಂದು ಕಾರಣಕ್ಕೆ ಕಾರಾಗೃಹ ಅಧಿಕಾರಿಗಳ ಜಗಳ ಕಾಯುತ್ತಿದ್ದ ರಾಹಿಲ್ ನಿನ್ನೆ ಸಾಯಂಕಾಲ ತನಗೆ ಆಸ್ಪತ್ರೆಗೆ ಹೋಗಬೇಕೆಂದು ವಿನೋದ್ ಬಳಿ ವರಾತ ತೆಗೆದಿದ್ದಾನೆ.

ಹಿಂಡಲಗಾ ಕಾರಾಗೃಹದಲ್ಲಿ ಕೈದಿಯೊಬ್ಬನಿಂದ ವಾರ್ಡನ್ ಮೇಲೆ ಗಂಭೀರ ಹಲ್ಲೆ, ಬಿಮ್ಸ್​ನಲ್ಲಿ ಚಿಕಿತ್ಸೆ
|

Updated on: May 28, 2024 | 10:30 AM

ಬೆಳಗಾವಿ: ಸೆರೆವಾಸದಲ್ಲಿದ್ದರೂ ಕೆಲ ಕೈದಿಗಳ ಸೊಕ್ಕಡಗುವುದಿಲ್ಲ, ಇದಕ್ಕೆ ಉದಾಹರಣೆಯೆಂದರೆ ನಿನ್ನೆ ಸಾಯಂಕಾಲ ಬೆಳಗಾವಿಯ ಹಿಂಡಲಗಾ ಕಾರಾಗೃಹದಲ್ಲಿ (Hindalaga Central Jail) ಕೈದಿಯೊಬ್ಬ ವಾರ್ಡನ್ ಮೇಲೆ ಮಾಡಿರುವ ತೀವ್ರ ಸ್ವರೂಪದ ಹಲ್ಲೆ. ನಗರದ ಬಿಮ್ಸ್ ಆಸ್ಪತ್ರೆಯಲ್ಲಿ (BIMS) ದಾಖಲಾಗಿ ಮಾಧ್ಯಮಗಳೊಂದಿಗೆ ಮಾತಾಡುತ್ತಿರುವ ವಿನೋದ್ ಲೋಕಾಪುರ್ (Vinod Lokapur) ಅವರು ರಾಹಿಲ್ ಅಲಿಯಾಸ್ ರೋಹನ್ (Rohan) ಹೆಸರಿನ ಕೈದಿಯಿಂದ ಹಲ್ಲೆಗೊಳಗಾಗಿದ್ದಾರೆ. ರಾಹಿಲ್​ ಹಾಸನದಿಂದ ಗಡೀಪಾರಾಗಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿರುವ ಕೈದಿ. ಇವನ ಹಿನ್ನೆಲೆ ಆಧಾರದಲ್ಲಿ ಜೈಲಿನ ಅತಿ ಭದ್ರತಾ ವಿಭಾಗದಲ್ಲಿ ಇರಿಸಲಾಗಿದೆಯಂತೆ. ಇಲ್ಲಿಗೆ ಬಂದಾಗಿನಿಂದ ಒಂದಿಲ್ಲೊಂದು ಕಾರಣಕ್ಕೆ ಕಾರಾಗೃಹ ಅಧಿಕಾರಿಗಳ ಜಗಳ ಕಾಯುತ್ತಿದ್ದ ರಾಹಿಲ್ ನಿನ್ನೆ ಸಾಯಂಕಾಲ ತನಗೆ ಆಸ್ಪತ್ರೆಗೆ ಹೋಗಬೇಕೆಂದು ವಿನೋದ್ ಬಳಿ ವರಾತ ತೆಗೆದಿದ್ದಾನೆ. ಆಸ್ಪತ್ರೆಗೆ ಕಳಿಸುವ ಉಸ್ತುವಾರಿ ಬೇರೆ ವಾರ್ಡನ್ ಕೈಲಿದೆ ಅವರು ಬರೋವರೆಗೆ ಕಾಯಬೇಕು ಅಂದಿದ್ದಕ್ಕೆ ರೊಚ್ಚಿಗೆದ್ದ ರಾಹಿಲ್ ಮನಬಂದಂತೆ ಹಲ್ಲೆ ಮಾಡಿದ್ದಾನೆ. ವಿನೋದ್ ಮಾತಾಡಲು ಕಷ್ಟಪಡುತ್ತಿರುವುದನ್ನು ಗಮನಿಸಬಹುದು. ಅವನ ವಿರುದ್ಧ ಕ್ರಮ ಜರುಗಿಸಬೇಕೆಂದು ವಿನೋದ್ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹಿಂಡಲಗಾ ಬಳಿಕ ಶಿವಮೊಗ್ಗ ಕೇಂದ್ರ ಕಾರಾಗೃಹದ ಅಕ್ರಮ ಬಯಲು; ದುಡ್ಡು ಕೊಟ್ರೆ ಸಾಕು ಕೈದಿಗೂ ಸಿಗತ್ತೆ ವಿಐಪಿ ಸೌಲಭ್ಯ

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ