Bengaluru News; ಮಂತ್ರಿ ಸ್ಥಾನ ಸಿಗದ ಕಾರಣ ಒಂದು ವಾರ ಅಸಮಾಧಾನ ಇತ್ತು, ಈಗ ಇಲ್ಲ: ಕೆಎಂ ಶಿವಲಿಂಗೇಗೌಡ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Jul 27, 2023 | 4:55 PM

ಶಾಸಕಕರು ಮತ್ತು ಸಚಿವರ ನಡುವೆ ಸಾಮರಸ್ಯ ಮೂಡಬೇಕಾದರೆ ಪ್ರತಿ ಮೂರು ತಿಂಗಳಿಗೊಮ್ಮೆ ಶಾಸಕಾಂಗ ಪಕ್ಷದ ನಡೆಸಬೇಕು ಅನ್ನೋದು ತಮ್ಮ ಸ್ವಂತ ಅಭಿಪ್ರಾಯ ಎಂದು ಶಿವಲಿಂಗೇಗೌಡ ಹೇಳಿದರು.

ಬೆಂಗಳೂರು: ವಿಧಾನ ಸೌಧ ಆವರಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ತನಗೆ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು. ಮಂತ್ರಿ ಸ್ಥಾನ (ministerial berth) ಸಿಗಲಿಲ್ಲವೆಂಬ ಬೇಸರ ಒಂದು ವಾರದ ಮಟ್ಟಿಗೆ ಇದ್ದಿದ್ದು ನಿಜ, ಅದರೆ ಈಗ ಅದು ದೂರವಾಗಿದೆ ಎಂದು ಹೇಳಿದ ಗೌಡರು ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನೇ ತನಗೆ ಮಂತ್ರಿ ಸ್ಥಾನ ನೋಡುವ ಘೋಷಣೆ ಮಾಡಿದ್ದಾರೆ, ಅವರಾಗಿ ನೀಡುವವರೆಗೆ ಕಾಯುವುದಾಗಿ ಹೇಳಿದರು. ಆಧಿವೇಶನ ಮುಗಿದ ಬಳಿಕ ಒಂದು ಶಾಸಕಾಂಗ ಪಕ್ಷದ ಸಭೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ನಿಜ, ಶಾಸಕಕರು ಮತ್ತು ಸಚಿವರ ನಡುವೆ ಸಾಮರಸ್ಯ ಮೂಡಬೇಕಾದರೆ ಪ್ರತಿ ಮೂರು ತಿಂಗಳಿಗೊಮ್ಮೆ ಶಾಸಕಾಂಗ ಪಕ್ಷದ ನಡೆಸಬೇಕು ಅನ್ನೋದು ತಮ್ಮ ಸ್ವಂತ ಅಭಿಪ್ರಾಯ ಎಂದು ಶಿವಲಿಂಗೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.