AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಚುನಾವಣೆ ಮತ್ತು ಸಂಪುಟ ರಚನೆ ಗಡಿಬಿಡಿಯಲ್ಲಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ರನ್ನು ಭೇಟಿಯಾಗಲಾಗಿರಲಿಲ್ಲ: ಡಿಕೆ ಶಿವಕುಮಾರ್

DK Shivakumar: ಚುನಾವಣೆ ಮತ್ತು ಸಂಪುಟ ರಚನೆ ಗಡಿಬಿಡಿಯಲ್ಲಿ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ರನ್ನು ಭೇಟಿಯಾಗಲಾಗಿರಲಿಲ್ಲ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:May 31, 2023 | 11:42 AM

Share

ಸವದಿ ಮತ್ತು ಶೆಟ್ಟರ್ ಅವರಲ್ಲದೆ, ಬೇರೆ ಕೆಲ ನಾಯಕರು ಬಿಜೆಪಿಯಲ್ಲಿ ತಮ್ಮ ಸ್ಥಾನಮಾನಗಳನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಬೆಳಗಾವಿ: ಬಿಜಪಿಯಿಂದ ಕಾಂಗ್ರೆಸ್ ಪಕ್ಷ ಸೇರಿದ ಲಕ್ಷ್ಮಣ ಸವದಿ (Laxman Savadi) ಮತ್ತು ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ತಾನು ಭೇಟಿಯಾಗುತ್ತಿರುವ ಉದ್ದೇಶವನ್ನು ನಗರದ ಮಾಧ್ಯಮ ಪ್ರತಿನಿಧಿಗಳ ಮುಂದೆ ಉಪ ಮುಖ್ಯಮಂತ್ರಿ (DK Shivakumar) ಬಿಡಿಸಿ ಹೇಳಿದರು. ಸವದಿ ಮತ್ತು ಶೆಟ್ಟರ್ ಅವರಲ್ಲದೆ, ಬೇರೆ ಕೆಲ ನಾಯಕರು ಬಿಜೆಪಿಯಲ್ಲಿ ತಮ್ಮ ಸ್ಥಾನಮಾನಗಳನ್ನು ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಚುನಾವಣೆಯಲ್ಲಿ ಕೆಲವರು ಗೆದ್ದಿದ್ದಾರೆ ಕೆಲವರು ಸೋತಿದ್ದಾರೆ. ಚುನಾವಣಾ ಪ್ರಚಾರದ ಓಡಾಟದ ಬಳಿಕ ಸಂಪುಟ ರಚನೆಯಲ್ಲಿ ಬ್ಯೂಸಿಯಾಗಿದ್ದರಿಂದ ಅವರೊಂದಿಗೆಲ್ಲ ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ ಅವರನ್ನು ಈಗ ಭೇಟಿಯಾಗುತ್ತಿರುವುದಾಗಿ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 31, 2023 11:34 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.