ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಗುರುವಾರ ಬೆಳಗ್ಗೆ 7. 41 ನಿಮಿಷಕ್ಕೆ ಸರಿಯಾಗಿ ತೀರ್ಥರೂಪಿಣಿಯಾಗಿ ಕಾವೇರಿ ಮಾತೆ ಉಕ್ಕಿ ಹರಿದಳು. ಭಕ್ತರ ಜಯಘೋಷ, ಅರ್ಚಕರ ವೇದ ಮಂತ್ರಘೋಷಗಳ ಮಧ್ಯೆ ಕಾವೇರಿ ದರ್ಶನ ನೀಡಿದಳು. ಕಾವೇರಿ ತೀರ್ಥೋದ್ಭವದ ಆ ದಿವ್ಯ ಕ್ಷಣದ ವಿಡಿಯೋ ಇಲ್ಲಿದೆ ನೋಡಿ.
ಮಡಿಕೇರಿ, ಅಕ್ಟೋಬರ್ 17: ಸಹಸ್ರಾರು ಭಕ್ತರ ಕಾತರದ ಕಾಯುವಿಕೆ ಕೊನೆಗೂ ಆ ಸಂಭ್ರಮದ ಕ್ಷಣದೊಂದಿಗೆ ಮುಕ್ತಾಯವಾಯಿತು. ಕೊಡಗು ಜಿಲ್ಲೆಯ ಮಡಿಕೇರಿಯ ಭಾಗಮಂಡಲದಲ್ಲಿ ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಜೀವ ನದಿ ಕಾವೇರಿ ಗುರುವಾರ ಬೆಳಗ್ಗೆ 7. 41 ನಿಮಿಷಕ್ಕೆ ಸರಿಯಾಗಿ ತೀರ್ಥ ರೂಪಿಣಿಯಾಗಿ ಉಕ್ಕಿ ಹರಿದಳು.
ತೀರ್ಥೋದ್ಭವದ ವೇಳೆ ಭಕ್ತರ ಜಯಘೋಷ, ಅರ್ಚಕರ ವೇದ ಮಂತ್ರಘೋಷಗಳು ಮುಗಿಲುಮುಟ್ಟಿದವು. ತೀರ್ಥ ಉಕ್ಕುತ್ತಿದ್ದಂತೆಯೇ ಮೊದಲ ತೀರ್ಥಥವನ್ನು ಬ್ರಹ್ಮ ದೇವನಿಗೆ ಅರ್ಪಣೆ ಮಾಡಲಾಯಿತು. ಬಳಿಕ ಅರ್ಚಕ ವೃಂದಕ್ಕೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ನಂತರ ಭಕ್ತವೃಂದ ತೀರ್ಥಸ್ನಾನಕ್ಕೆ ಕಲ್ಯಾಣಿಗೆ ಮುಗಿಬಿದ್ದಿತು. ಬಿಂದಿಗೆ, ಕೊಡಗಳಲ್ಲಿ ತೀರ್ಥ ಸಂಗ್ರಹ ಮಾಡುತ್ತಿರುವುದು ಕಂಡುಬಂತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್, ಬೈಕ್ಗಳು ಬೆಂಕಿಗಾಹುತಿ

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
