ಕಸದ ತೊಟ್ಟಿ ಸೇರಿದ್ದ ಡೈಮಂಡ್ ನೆಕ್ಲೆಸ್ ಹುಡುಕಿಕೊಟ್ಟ ಪೌರಕಾರ್ಮಿಕ, ಸಿಕ್ಕಿದ್ದೇ ರೋಚಕ

ವ್ಯಕ್ತಿಯೊಬ್ಬರು ಮಿಸ್​ ಆಗಿ ಡಸ್ಟ್​ ಬಿನ್​ಗೆ ಹಾಕಿದ್ದ ಬರೋಬ್ಬರಿ ಐದು ಲಕ್ಷ ರೂಪಾಯಿ ಮೌಲ್ಯದ ಡೈಮಂಡ್​ ನೆಕ್ಲೆಸ್​ ಸಿಕ್ಕಿದೆ. ಡಸ್ಟ್​ ಬಿನ್​ ಮೂಲಕ ಕಸದ ತೊಟ್ಟಿಗೆ ಹೋಗಿದ್ದ ಡೈಮೆಂಡ್ ನೆಕ್ಸೆಸ್​ ಕೊನೆಗೆ ಮಾಲೀಕನಿಗೆ ಸಿಕ್ಕಿದೆ. ಆದ್ರೆ, ಡಸ್ಟ್​ ಬಿನ್ ಸೇರಿದ್ದ ಡೈಮಂಡ್ ನೆಕ್ಲೆಸ್​ ಸಿಕ್ಕಿದ್ದೇ ರೋಚಕ..

ಕಸದ ತೊಟ್ಟಿ ಸೇರಿದ್ದ ಡೈಮಂಡ್ ನೆಕ್ಲೆಸ್ ಹುಡುಕಿಕೊಟ್ಟ ಪೌರಕಾರ್ಮಿಕ, ಸಿಕ್ಕಿದ್ದೇ ರೋಚಕ
|

Updated on: Jul 22, 2024 | 5:06 PM

ಚೆನೈ, (ಜುಲೈ 22): ಆಕಸ್ಮಿಕವಾಗಿ ಮನೆಯ ಡಸ್ಟ್​ ಬಿನ್​ ಮೂಲಕ ಕಸದ ತೊಟ್ಟಿ ಸೇರಿದ್ದ ಬರೋಬ್ಬರಿ ಐದು ಲಕ್ಷ ರೂಪಾಯಿ ಮೌಲ್ಯದ ಡೈಮಂಡ್ ನೆಕ್ಲೆಸ್​ ಮರಳಿ ಸಿಕ್ಕಿದೆ. ಪೌರ ಕಾರ್ಮಿಕರು ಹುಡುಕಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ವಜ್ರದ ಹಾರವನ್ನು ವಾರಸುದಾರರಿಗೆ ವಾಪಸ್‌ ಹಿಂತಿರುಗಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ. ಈ ಘಟನೆಯ ವಿಡಿಯೋ ಕೂಡ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಸ್ವಚ್ಛತಾ ಸಿಬ್ಬಂದಿ ಪ್ರಾಮಾಣಿಕತೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಚೆನ್ನೈನ ವಿರುಗಂಪಕ್ಕಂ ನಿವಾಸಿ ದೇವರಾಜ್‌ ಎನ್ನುವವರು ತಮ್ಮ ಸಂಬಂಧಿಯೊಬ್ಬರಿಗೆ ಗಿಫ್ಟ್‌ ನೀಡಲು ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್‌ಅನ್ನು ಖರೀದಿಸಿದ್ದರು. ಆದರೆ ಮನೆಯಲ್ಲಿ ಆಕಸ್ಮಿಕವಾಗಿ ಕಸದೊಂದಿಗೆ ವಜ್ರದ ನೆಕ್ಲೇಸ್‌ ಅನ್ನು ಕೂಡಾ ತೊಟ್ಟಿಗೆ ಎಸೆದಿದ್ದಾರೆ. ಮೊದಲು ಈ ವಿಚಾರ ತಿಳಿದಿರಲಿಲ್ಲ. ಬಳಿಕ ದೇವರಾಜ್‌ಗೆ ಕಸದೊಂದಿಗೆ ನೆಕ್ಲೇಸ್‌ ಕೂಡಾ ಹೋಗಿದೆ ಎಂದು ತಿಳಿದು ಬಂದಿದೆ. ಲಕ್ಷಾಂತರ ರೂಪಾಯಿ ಬೆಲೆಬಾಳುವ ಆಭರಣವನ್ನು ಕಳೆದುಕೊಂಡ ಅವರು, ಕೂಡಲೇ ಕೂಡಲೇ ಗ್ರೇಟರ್‌ ಚೆನ್ನೈ ಕಾರ್ಪೋರೇಷನ್‌ (ಜಿಸಿಸಿ) ಅಧಿಕಾರಿಗಳನ್ನು ಸಂಪರ್ಕಿಸಿ ಡೈಮಂಡ್‌ ನೆಕ್ಲೇಸ್‌ ಕಳೆದುಕೊಂಡ ವಿಚಾರವನ್ನು ವಿವರಿಸಿದ್ದಾರೆ. ದೇವರಾಜ್‌ ಅವರ ಮನವಿಗೆ ಸ್ಪಂದಿಸಿದ ಗ್ರೇಟರ್‌ ಚೆನ್ನೈ ಕಾರ್ಪೋರೇಷನ್‌ (ಜಿಸಿಸಿ) ಜಿಸಿಸಿ ಗುತ್ತಿಗೆದಾರರ ಚಾಲಕ ಜೆ. ಆಂಥೋನಿಸಾಮಿ ಸ್ವಚ್ಛತಾ ಸಿಬ್ಬಂದಿಗಳ ಗಮನಕ್ಕೆ ತಂದಿದ್ದು, ಹುಡುಕುವಂತೆ ಸೂಚಿಸಿದ್ದಾರೆ. ಗ್ರೇಟರ್‌ ಚೆನ್ನೈ ಕಾರ್ಪೋರೇಷನ್‌ ಸ್ವಚ್ಛತಾ ಸಿಬ್ಬಂದಿ ಸತತ ಹುಡುಕಾಟದ ಬಳಿಕ ಅಂತಿಮವಾಗಿ ಪೌರಕಾರ್ಮಿಕರೊಬ್ಬರಿಗೆ ನೆಕ್ಸೇಸ್ ಸಿಕ್ಕಿದೆ. ಕೂಡಲೇ ಅವರು ಅದನ್ನು ಸ್ವಚ್ಛಗೊಳಿಸಿ ದೇವರಾಜ್‌ ಅವರಿಗೆ ಹಿಂದಿರುಗಿಸಿದ್ದಾರೆ. 5 ಲಕ್ಷ ಮೌಲ್ಯದ ವಜ್ರದ ನೆಕ್ಲೇಸ್ ಮತ್ತೆ ಸಿಗಲು ಸಹಾಯ ಮಾಡಿದ ಆಂಥೋನಿಸಾಮಿ ಮತ್ತು ಸ್ವಚ್ಛತಾ ಸಿಬ್ಬಂದಿಗೆ ದೇವರಾಜ್‌ ಹಾಗೂ ಕುಟುಂಬಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

Follow us
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್