ವಿಧಾನಮಂಡಲ ಅಧಿವೇಶನ ಪುನರಾರಂಭ; ಸಿಎಂ ವಿರುದ್ಧ ಹೋರಾಟ ತೀವ್ರಗೊಳಿಸಲು ಪ್ಲ್ಯಾನ್

Karnataka Legislative Assembly Session Live: ಇಂದು ಮತ್ತೆ ವಿಧಾನಮಂಡಲ ಅಧಿವೇಶನ ಪುನರಾರಂಭಗೊಂಡಿದ್ದು ಇಂದು ಸಿಎಂ ವಿರುದ್ಧ ಹೋರಾಟ ತೀವ್ರಗೊಳಿಸಲು ವಿರೋಧ ಪಕ್ಷಗಳು ಪ್ಲ್ಯಾನ್ ಮಾಡಿವೆ. ವಾಲ್ಮೀಕಿ ನಿಗಮದ ಹಗರಣ ಆಯ್ತು. ಈಗ ‘ಮುಡಾ’ ಹಗರಣದ ಬಗ್ಗೆ ತೀವ್ರ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಧಾನಮಂಡಲ ಅಧಿವೇಶನ ಪುನರಾರಂಭ; ಸಿಎಂ ವಿರುದ್ಧ ಹೋರಾಟ ತೀವ್ರಗೊಳಿಸಲು ಪ್ಲ್ಯಾನ್
|

Updated on: Jul 22, 2024 | 10:50 AM

ಬೆಂಗಳೂರು, ಜುಲೈ.22: ಎರಡು ದಿನಗಳ ವಿರಾಮದ ಬಳಿಕ ರಾಜ್ಯ ವಿಧಾನಮಂಡಲ ಇಂದು ಮತ್ತೆ ಪುನರಾರಂಭಗೊಂಡಿದೆ. ಇದೇ ಜುಲೈ 15ರಿಂದ ಆರಂಭವಾಗಿದ್ದ ವಿಧಾನಸಭೆ ಕಲಾಪವನ್ನ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣವೇ ನುಂಗಿ ಹಾಕಿತ್ತು. ತನಿಖೆಯನ್ನ ಸಿಬಿಐಗೆ ಒಪ್ಪಿಸಿ, ನೈತಿಕತೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ಬೇಕೆಂದು ಬಿಜೆಪಿ, ಜೆಡಿಎಸ್ ಶಾಸಕರು ಸದನದ ಒಳಗೆ, ಹೊರಗೆ ಪ್ರತಿಭಟನೆ ನಡೆಸಿದ್ದರು. ಅಲ್ದೇ, ಸದನದ ಬಾವಿಗಿಳಿದು ಹೋರಾಟ ನಡೆಸಿದ್ದರು. ನಿಮ್ಮ ಸುಳ್ಳು ಆರೋಪಕ್ಕೆ ಬಗ್ಗಲ್ಲ ಅಂತಾ ಸಿಎಂ ಸದನದಲ್ಲೇ ತೋಳ್ ತಟ್ಟಿ ತಿರುಗೇಟು ನೀಡಿದ್ದರು. ಇದೀಗ ಎರಡು ದಿನಗಳ ಬ್ರೇಕ್ ಬಳಿಕ ಇಂದು ಮತ್ತೆ ವಿಧಾನಮಂಡಲ ಪುನರಾರಂಭಗೊಂಡಿದೆ.

ಕಳೆದ ಚರ್ಚೆಯಲ್ಲಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣ ಸದನದೊಳಗೆ ದೊಡ್ಡ ಹೈಡ್ರಾಮವೇ ಸೃಷ್ಟಿಸಿತ್ತು. ಒಂದು ಹಂತದಲ್ಲಿ ತೀರಾ ವೈಯಕ್ತಿಕ ಮಟ್ಟಕ್ಕಿಳಿದಿದ್ದ ನಾಯಕರು ದೊಡ್ಡ ವಾಗ್ವಾದವನ್ನೇ ನಡೆಸಿದ್ದರು. ಇನ್ನು ಮುಡಾ ಅಕ್ರಮವೂ ಸದನದಲ್ಲಿಂದು ಕಿಚ್ಚು ಹಚ್ಚುವ ಸಾಧ್ಯತೆ ಇದೆ. ಮುಡಾ ಹಗರಣದಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿಬಂದಿದೆ. ಸಿಎಂ ಸಿದ್ದರಾಮಯ್ಯ ಅವ್ರ ಪತ್ನಿ ಪಾರ್ವತಿ, ಬಾಮೈದಾ ಮಲ್ಲಿಕಾರ್ಜುನ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. ಆದ್ದರಿಂದ ಮುಡಾ ಸೈಟ್ ಹಂಚಿಕೆ ಹಗರಣವನ್ನೇ ಆದ್ಯತೆಯ ಹೋರಾಟವಾಗಿ ತೆಗೆದುಕೊಳ್ಳಲು ಬಿಜೆಪಿ, ಜೆಡಿಎಸ್ ಶಾಸಕರು ಮುಂದಾಗಿದ್ದಾರೆ. ಇನ್ನು ಮಳೆ ಅವಾಂತರ, ನೆರೆ ಹಾವಳಿ ಇಂದು ಸದನದಲ್ಲಿ ಸದ್ದು ಮಾಡುವ ಸಾಧ್ಯತೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಆರತಿ ತಟ್ಟೆಗೆ ಹಾಕಲು ಸಿದ್ದರಾಮಯ್ಯಗೆ ದುಡ್ಡು ಕೊಟ್ಟ ಡಿಕೆ ಶಿವಕುಮಾರ್!
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎತ್ತಿನಹೊಳೆ ಯೋಜನೆ ಮೊದಲ ಹಂತ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಹಿಂದಿನ ಬಿಜೆಪಿ ಸರ್ಕಾರಕ್ಕೆ ಗುಮ್ಮಿದ ಪ್ರತಾಪ್‌ ಸಿಂಹ: ವಿಡಿಯೋ ವೈರಲ್
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಎತ್ತಿಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ